ಬ್ರೇಕಿಂಗ್ ನ್ಯೂಸ್
27-03-26 04:04 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 27: ಹತ್ತಿರದ ದಾರಿಯೆಂದು ಚಾಲಕನೊಬ್ಬ ಟ್ರ್ಯಾಕ್ಟರ್'ನ್ನು ತುಂಗಭದ್ರಾ ನದಿಗೆ ನುಗ್ಗಿಸಿದ್ದು, ಪರಿಣಾಮ ಅದರಲ್ಲಿದ್ದ 10ಕ್ಕೂ ಹೆಚ್ಚು ಮಂದಿ ನದಿ ಮಧ್ಯೆ ಸಿಲುಕಿ ಜೀವ ಭಯದಲ್ಲಿ ಪರದಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಮೂಲದ ಭಕ್ತರಿದ್ದ ವಾಹನ ತುಂಗಭದ್ರಾ ನದಿ ದಾಟಿ ಸಿಂಗಟಾಳೂರು ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲ್ಲೂಕಿನ ನವಲಿ ಗ್ರಾಮದ ಭಕ್ತರು ಹೀಗೆ ಹೋದರೆ ತಡವಾಗುತ್ತೆ ಎಂದು ಶಾರ್ಟ್ಕಟ್ ಆಯ್ಕೆ ಮಾಡಿಕೊಂಡಿದ್ದಾರೆ. ಚಾಲಕನೂ ನೀರಿನ ಮಟ್ಟ ಕಡಿಮೆ ಇದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ, ಎಲ್ಲರೂ ಟ್ರ್ಯಾಕ್ಟರ್ ಮೂಲಕ ನದಿಯನ್ನು ದಾಟಲು ಮುಂದಾಗಿದ್ದರು.

ಆದರೆ, ಟ್ರ್ಯಾಕ್ಟರ್ ನದಿ ಮಧ್ಯ ತಲುಪಿದಾಗ ಚಾಲಕ ಗಾಬರಿಗೊಂಡಿದ್ದಾನೆ. ಇದೇ ವೇಳೆ ನೀರಿನ ಮಟ್ಟ ಹೆಚ್ಚಾಗಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮುಳುಗಲು ಆರಂಭಿಸಿತ್ತು. ನೀರು ಕುತ್ತಿಗೆಯ ಮಟ್ಟಕ್ಕೆ ತಲುಪುತ್ತಿದ್ದಂತೆ ಭಕ್ತರು ಭಯದಿಂದ ಸಹಾಯಕ್ಕಾಗಿ ಮೊರೆ ಇಟ್ಟಿದ್ದಾರೆ.
ಈ ಸಂದರ್ಭ ಸ್ಥಳದಲ್ಲಿದ್ದ ಮೀನುಗಾರರು ತಕ್ಷಣ ಧಾವಿಸಿ, ತಮ್ಮ ಜೀವದ ಹಂಗು ತೊರೆದು ಎಲ್ಲ ಭಕ್ತರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಂತರ ಕ್ರೇನ್ ಸಹಾಯದಿಂದ ಟ್ರ್ಯಾಕ್ಟರ್ ಅನ್ನು ನದಿಯಿಂದ ಹೊರಕ್ಕೆಳೆದಿದ್ದಾರೆ. ಘಟನೆ ಕುರಿತು ಟ್ರ್ಯಾಕ್ಟರ್ ನಲ್ಲಿದ್ದ ಭಕ್ತನೋರ್ವ ಪ್ರತಿಕ್ರಿಯಿಸಿ, ಚಾಲಕನ ಮಾತು ನಂಬಿ ನಾವು ಒಪ್ಪಿದ್ದೆವು. ನಮಗೆ ಅಪಾಯ ಇದೆ ಎಂದು ತಿಳಿದಿದ್ದರೂ ಹೋಗಿದ್ದೆವು. ದೇವರ ಕೃಪೆಯಿಂದ ಬದುಕಿದ್ದೇವೆ. ನಮ್ಮನ್ನು ರಕ್ಷಿಸಿದ ಮೀನುಗಾರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm