ಬ್ರೇಕಿಂಗ್ ನ್ಯೂಸ್
28-03-26 02:54 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 28: ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ತಾಯಿ ತನ್ನ ಮೂವರು ಅಪ್ರಾಪ್ತ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬ ಮಹಿಳೆ ತನ್ನ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಕೇವಲ 1 ವರ್ಷದ ಸಂತೋಷ್ ಅವರನ್ನು ಬಾವಿಗೆ ತಳ್ಳಿ ಬಳಿಕ ತಾನೂ ಸಹ ಅದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಳಿಕ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ವೇಳೆ ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕರಾಗಿ ಕೆಲಸಕ್ಕೆ ತೆರಳಿದ್ದರಿಂದ ಊರಲ್ಲಿ ಇರಲಿಲ್ಲ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾವಿಯಿಂದ ನಾಲ್ವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪತಿ ಶಂಕ್ರಪ್ಪ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮೂವರು ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ನೇರ ಕಾರಣ ಎಂದು ಆರೋಪಿಸಿದ್ದಾರೆ.
ಘಟನೆ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿದೆ. ಗ್ರಾಮಸ್ಥರ ಪ್ರಕಾರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ಮನಸ್ತಾಪದಿಂದ ರಾಜಶ್ರೀ ತೀವ್ರ ನಿರ್ಧಾರ ಕೈಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm