ಬ್ರೇಕಿಂಗ್ ನ್ಯೂಸ್
28-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 28: ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳು ತಮ್ಮ ತಂಡದ ಮೇಲೆ ಇರುವ ಅಭಿಮಾನವನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಅಭಿಮಾನಿಗಳು ಸಾಮೂಹಿಕವಾಗಿ ರಕ್ತದಾನ ಮಾಡಿ ತಂಡದ ಗೆಲುವಿಗಾಗಿ ಶುಭ ಹಾರೈಸಿದ್ದಾರೆ.
ಪ್ರತಿ ವರ್ಷ ಆರ್ಸಿಬಿ ಪಂದ್ಯಕ್ಕೂ ಮುನ್ನ ರಕ್ತದಾನ ಮಾಡುವ ಪದ್ಧತಿಯನ್ನು ಮುಂದುವರಿಸಿರುವ ಅಭಿಮಾನಿಗಳು, “ಈ ಬಾರಿ ಉದ್ಘಾಟನಾ ಪಂದ್ಯದಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಜೊತೆಗೆ ಈ ಸೀಸನ್ನಲ್ಲಿ ಕಪ್ ನಮ್ದೇ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಆರ್ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಮೈದಾನದಲ್ಲಿ ನೋಡುವುದೇ ನಮಗೆ ದೊಡ್ಡ ಸಂತೋಷ” ಎಂದು ಅಭಿಮಾನಿಗಳು ಉತ್ಸಾಹದಿಂದ ತಿಳಿಸಿದ್ದಾರೆ.
ರಕ್ತದಾನ ನಂತರ ಅಭಿಮಾನಿಗಳು ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದು, ಕಳೆದ ಬಾರಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಅಭಿಮಾನಿಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು. “ಆ ಅಭಿಮಾನಿಗಳಿಗೆ ನ್ಯಾಯ ಸಿಗುವಂತೆ ತಂಡ ಆಡಬೇಕು” ಎಂಬ ಭಾವನಾತ್ಮಕ ಮನವಿ ಕೂಡ ಕೇಳಿಬಂದಿದೆ.
ಇದೇ ವೇಳೆ, 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುವ ಐಪಿಎಲ್ ಟೂರ್ನಿಯ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್ನ ಹೃದಯಭೂಮಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಬೆಂಗಳೂರಿನಲ್ಲಿ 18 ವರ್ಷಗಳ ಬಳಿಕ ಈ ಗೌರವ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯುತ್ತಿರುವ ಹಿನ್ನೆಲೆ, ಭದ್ರತೆಗೆ ವಿಶೇಷ ಒತ್ತು ನೀಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm