ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm