ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm