ಬ್ರೇಕಿಂಗ್ ನ್ಯೂಸ್
02-04-26 02:46 pm HK News Staffer ಕರ್ನಾಟಕ
ಜಾರ್ಖಂಡ್, ಏಪ್ರಿಲ್ 02: ಮಗನ ಅನಾರೋಗ್ಯ ಗುಣಪಡಿಸಲು ಮೂಢನಂಬಿಕೆಗೆ ಒಳಗಾಗಿ ತಾಯಿ ತಾನು ಹೆತ್ತ ಮಗಳನ್ನೇ ಬಲಿಕೊಟ್ಟ ಭೀಕರ ಘಟನೆ ಜಾರ್ಖಂಡ್ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆಕೆಯ ಪ್ರಿಯಕರ ಹಾಗೂ ಮಾಂತ್ರಿಕ ಎಂದು ಹೇಳಿಕೊಂಡಿದ್ದ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 24ರ ರಾತ್ರಿ ಕುಸುಂಭ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ದಿನ ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಬಾಲಕಿ ಕಾಣೆಯಾಗಿದ್ದಳು. ಮರುದಿನ ಬೆಳಗ್ಗೆ ಸ್ಥಳೀಯ ಶಾಲೆಯ ಹಿಂಭಾಗದ ಬಿದಿರಿನ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆರಂಭದಲ್ಲಿ ತಾಯಿ ನೀಡಿದ ದೂರಿನ ಆಧಾರದ ಮೇಲೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಯಿತಾದರೂ, ತನಿಖೆ ಮುಂದುವರಿದಂತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರ ಸೂಚನೆಯ ಮೇರೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಯಿತು. ತನಿಖೆಯಲ್ಲಿ ತಾಯಿಯೇ ಈ ಕೃತ್ಯದ ಮೂಲ ಕಾರಣ ಎಂಬುದು ಬಹಿರಂಗವಾಯಿತು. ‘ಭಗ್ತಿನ್’ ಎಂದು ಕರೆಯಲ್ಪಡುವ ಶಾಂತಿ ದೇವಿ ಎಂಬ ಮಹಿಳೆ, ಮಗನ ರೋಗ ಗುಣವಾಗಲು ನರಬಲಿ ನೀಡಬೇಕೆಂದು ಹೇಳಿದ್ದಾಳೆ. ಇದನ್ನು ನಂಬಿದ ತಾಯಿ ಕಳೆದ ಮೂರು ತಿಂಗಳಿಂದ ಆಕೆಯ ಸಂಪರ್ಕದಲ್ಲಿದ್ದಳು.
ಪೂಜೆಯ ನೆಪದಲ್ಲಿ ತಾಯಿ ತನ್ನ ಪ್ರಿಯಕರ ಭೀಮ್ ರಾಮ್ ಜೊತೆ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದುಕೊಂಡು ಹೋಗಿದ್ದು, ನಂತರ ಹತ್ತಿರದ ಬಿದಿರಿನ ತೋಪಿಗೆ ಕರೆದೊಯ್ದು ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮ್ ರಾಮ್ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದರೆ, ತಾಯಿ ಮಗುವಿನ ಕಾಲುಗಳನ್ನು ಹಿಡಿದಿದ್ದಾಳೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಗುಪ್ತಾಂಗಗಳೊಳಗೆ ಮರದ ಕೋಲನ್ನು ಹಾಕಿದ್ದಾರೆ. ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತವನ್ನು ತೆಗೆದುಕೊಂಡಿದ್ದಾನೆ. ನಂತರ ಶವವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು ಮೂವರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೂಢನಂಬಿಕೆ ಮತ್ತು ಕುರುಡು ಆಚರಣೆಗಳಿಂದ ಉಂಟಾಗುವ ಅಪಾಯಗಳಿಗೆ ಈ ಘಟನೆ ಭೀಕರ ಉದಾಹರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm