ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm