ಬ್ರೇಕಿಂಗ್ ನ್ಯೂಸ್
06-04-26 08:51 pm HK News Staffer ಕರ್ನಾಟಕ
ಮೈಸೂರು, ಎಪ್ರಿಲ್ 6: ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿಹಾಕಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದು ಮರು ಪ್ರಶ್ನೆ ಹಾಕಿದರು.
ಹೈಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಅಂತ ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ, ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪ ಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ ಎಂದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm