ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm