ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm