ಬ್ರೇಕಿಂಗ್ ನ್ಯೂಸ್
10-04-26 03:25 pm HK News Desk ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ಪ್ರವಾಸಿಗರ ತಂಡದಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (14) ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಮಾಣಿಕ್ಯಧಾರಾ ಬಳಿಯ ಅತ್ಯಂತ ಕಡಿದಾದ ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ.
ಏಪ್ರಿಲ್ 7ರಂದು ಕೇರಳದಿಂದ 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಶ್ರೀನಂದಾ, ದತ್ತಪೀಠ ಹಾಗೂ ಮಾಣಿಕ್ಯಧಾರಾ ದರ್ಶನದ ಬಳಿಕ ಹಠಾತ್ತಾಗಿ ನಾಪತ್ತೆಯಾಗಿದ್ದರು. ಬಾಲಕಿಯ ಪತ್ತೆಗಾಗಿ ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎಎನ್ಎಫ್ ತಂಡಗಳು ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯದ ನಡುವೆ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಶೋಧ ನಡೆಸಲಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಪ್ರಪಾತದ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೋ, ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ. ಮಗಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರವಾಸಿ ತಾಣದಲ್ಲಿ ಶೋಕದ ಛಾಯೆ ಆವರಿಸಿದೆ. ಎರಡು ದಿನವಾದರೂ ಮಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ, ಮಗಳು ಎಲ್ಲಿಯೂ ಬಿದ್ದಿರಲಿಕ್ಕಿಲ್ಲ. ಯಾವುದೋ ಅಮಲು ಪದಾರ್ಥ ಕೊಟ್ಟು ಅಪಹರಿಸಿರುವ ಶಂಕೆ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಬಾಲಕಿಯ ಶವ ಆಳ ಪ್ರತಾಪದಲ್ಲಿ ಕಂಡುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
A 14-year-old girl from Kerala, who had gone missing during a tourist trip three days ago, was found dead near Manikyadhara Falls in the Chandradrona hill ranges on Friday. The deceased has been identified as Sreenanda, a native of Palakkad, Kerala. Her body was recovered from a steep gorge nearly 2,000 feet deep near the falls.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm