ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm