ಬ್ರೇಕಿಂಗ್ ನ್ಯೂಸ್
14-04-26 02:04 pm HK News Staffer ಕರ್ನಾಟಕ
ಬೆಂಗಳೂರು, ಏ 14: ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದಲೇ ಜಾರಿಯಾಗಿದೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ (ಏಪ್ರಿಲ್ 13) ನಜೀರ್ ಅಹ್ಮದ್ ಅವರಿಗೆ ರಾಜೀನಾಮೆ ನೀಡಲು ಗಡುವು ನೀಡಿದ್ದರು. ನಿಗದಿತ ಅವಧಿಯೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ವಜಾಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಒಳಭಿನ್ನತೆಗಳು ಬಹಿರಂಗವಾಗಿದ್ದು, ಅದರ ಪರಿಣಾಮವಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದ ನಡುವೆ, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಪತ್ರಿಕಾಗೋಷ್ಠಿ ನಡೆಸಿ ಗಂಭೀರ ಆರೋಪಗಳನ್ನು ಮಾಡಿದ್ದರು.
ಈ ಬೆಳವಣಿಗೆಯ ನಂತರ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಳಿಕ ಆ ಘಟಕವನ್ನೇ ವಿಸರ್ಜಿಸಲಾಗಿದೆ.
ನಜೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಆಪ್ತರಾಗಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಉಂಟಾದ ಬಂಡಾಯವನ್ನು ಶಮನ ಮಾಡುವ ಜವಾಬ್ದಾರಿಯನ್ನೂ ಅವರಿಗೆ ನೀಡಲಾಗಿತ್ತು. ಆದರೆ, ಈ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ವಿಶೇಷವಾಗಿ ಸಾದಿಕ್ ಪೈಲ್ವಾನ್ ಬಂಡಾಯ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವಲ್ಲಿ ಹಿಂದೇಟು ಹಾಕಿದರೆಂಬ ಮಾಹಿತಿ ಲಭ್ಯವಾಗಿದ್ದು, ಪ್ರಚಾರ ಕಾರ್ಯದಲ್ಲೂ ದೂರ ಉಳಿದಿದ್ದರು ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಪಕ್ಷದ ಹೈಕಮಾಂಡ್ ಕಠಿಣ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm