ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 01:24 pm
Udupi Correspondent
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm