ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm