ಬ್ರೇಕಿಂಗ್ ನ್ಯೂಸ್
21-04-26 09:02 pm HK News Staffer ಕರ್ನಾಟಕ
ಚೆನ್ನೈ, ಎಪ್ರಿಲ್ 21: ತಮಿಳುನಾಡು ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಎಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಎಐಡಿಎಂಕೆ ಪಕ್ಷವು ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದರು.
ತಮ್ಮ ಹೇಳಿಕೆ ವಿವಾದ ಆಗುತ್ತಲೇ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಒಬ್ಬ ಭಯೋತ್ಪಾದಕ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಾರೆ ಎಂದು ನಾನು ಹೇಳಲು ಬಯಸಿದ್ದೆ. ಪ್ರಧಾನಿ ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ ಮತ್ತು ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಭಯ ಉಂಟು ಮಾಡುತ್ತದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.
ತಮ್ಮ ಹೇಳಿಕೆ ಪ್ರಧಾನಿ ಕಾರ್ಯಶೈಲಿಯನ್ನ ಪ್ರಶ್ನಿಸುವ ಉದ್ದೇಶ ಹೊಂದಿತ್ತೇ ಹೊರತು ವೈಯಕ್ತಿಕ ದಾಳಿ ಮಾಡುವ ಉದ್ದೇಶವನ್ನಲ್ಲ. ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಧಾನಿ ತಮಗೆ ಬೇಕಾದ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು. ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮತ್ತು CBI ನಂತಹ ಪ್ರಮುಖ ಸಂಸ್ಥೆಗಳು ಸಂಪೂರ್ಣ ಪ್ರಧಾನಿಯವರ ನಿಯಂತ್ರಣದಲ್ಲಿವೆ ಮತ್ತು ವಿರೋಧಿಗಳನ್ನ ಬೆದರಿಸಲು ಅವುಗಳನ್ನು ಬಳಸಲಾಗುತ್ತಿದೆ ಎಂದವರು ಹೇಳಿದರು.
ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಮೋದಿಯನ್ನು ಅವಮಾನಿಸುವುದು ಕಾಂಗ್ರೆಸ್ನ ಪಿತೂರಿ ಎಂದು ಬಿಜೆಪಿ ವಕ್ತಾರ ಸಂಭಿತ್ ಪಾತ್ರ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವುದು ನಾಲಿಗೆಯ ಎಡವಟ್ಟಲ್ಲ, ಬದಲಾಗಿ ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಮಾಡಿದ ಹೇಳಿಕೆ ಎಂದು ಪತ್ರಾ ಆರೋಪಿಸಿದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm