ಬ್ರೇಕಿಂಗ್ ನ್ಯೂಸ್
23-04-26 10:54 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 23: ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆ–1ರ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಸಚಿವರ ಘೋಷಣೆ ಬಳಿಕ ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್ಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ ಕರ್ನಾಟಕ ಹೈಕೋರ್ಟ್ ಆದೇಶದ ಹಿನ್ನೆಲೆ ಮಹತ್ವದ ಬದಲಾವಣೆ ಮಾಡಲಾಗಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕ ನೀಡಲಾಗಿದೆ. ಇದರ ಪರಿಣಾಮವಾಗಿ ಈ ವರ್ಷದ ಫಲಿತಾಂಶವನ್ನು 525 ಅಂಕಗಳ ಬದಲು 625 ಅಂಕಗಳಿಗೆ ಪ್ರಕಟಿಸಲಾಗುತ್ತಿದೆ.
ಈ ಬಾರಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ವಿದ್ಯಾರ್ಥಿಗಳಿಗೆ ಮತ್ತೊಂದು ವಿಶೇಷ ಸೌಲಭ್ಯವಾಗಿ, ಈ ವರ್ಷ ಮೊದಲ ಬಾರಿಗೆ ಅಂಕಪಟ್ಟಿಯನ್ನು DigiLocker ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶವನ್ನು https://karresults.nic.in ವೆಬ್ಸೈಟ್ ಹಾಗೂ ಕರ್ನಾಟಕ ಒನ್ ಮೊಬೈಲ್ ಆಪ್ನಲ್ಲಿ ವೀಕ್ಷಿಸಬಹುದಾಗಿದೆ.
2025-26 ರ SSLC ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಆದರೆ ವಿದ್ಯಾರ್ಥಿಗಳಲ್ಲಿ ಹಿಂದಿ ಪರೀಕ್ಷೆಯ ಬಗ್ಗೆ ಗೊಂದಲ ಉಂಟಾಗಿತ್ತು. ಏಕೆಂದರೆ ಸರ್ಕಾರ ಏಕಾಏಕಿ ಹಿಂದಿ ಭಾಷೆ ಅಂಕಗಳ ಬದಲು, ಗ್ರೇಡ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದರ ನಡುವೆಯೇ ಹಲವರು ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಕೋರ್ಟ್, ಅಂಕಗಳನ್ನೇ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶ ಜಾರಿ ಮಾಡಿತ್ತು. ಇದರೊಂದಿಗೆ ಸರ್ಕಾರ ಕೂಡ ಕೋರ್ಟ್ ಆದೇಶದಂತೆ ತೃತೀಯ ಭಾಷೆಗೆ ಅಂಕ ನೀಡಲು ಮುಂದಾಗಿದೆ. ಆದರೆ ಈ ಬಾರಿ ತೃತೀಯ ಭಾಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗುವ ಸಾಧ್ಯತೆ ಇದೆ. ಏಕೆಂದರೆ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಭಾಗ್ಯ ನೀಡುವ ಚಿಂತನೆಯನ್ನು ಸರ್ಕಾರ ಮಾಡಿದೆ. ಇದರೊಂದಿಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಫಲಿತಾಂಶ ಸಿಗುವ ನಿರೀಕ್ಷೆ ಇದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm