ಬ್ರೇಕಿಂಗ್ ನ್ಯೂಸ್
23-04-26 01:36 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದ ವಿದ್ಯಾರ್ಥಿಗಳು ಹಿಂದಿಗಿಂತ ಹೆಚ್ಚು ಪಾಸ್ ಆಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು ಈ ಬಾರಿ ಒಟ್ಟು 94.10 ಶೇ. ಮಂದಿ ತೇರ್ಗಡೆಯಾಗಿದ್ದಾರೆ.
ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಂದಿ ಉತ್ತೀರ್ಣರಾಗಿದ್ದು, ಒಟ್ಟು ಪಾಸ್ ಪ್ರಮಾಣ ಶೇ.94.1ಕ್ಕೆ ಏರಿಕೆಯಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ರಾಜ್ಯಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.98.40 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ (98.18%) ದ್ವಿತೀಯ ಹಾಗೂ ಉತ್ತರ ಕನ್ನಡ (98.09%) ತೃತೀಯ ಸ್ಥಾನ ಗಳಿಸಿವೆ. ಹಾಸನ, ಮಂಡ್ಯ, ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳು 95% ಮೇಲ್ಪಟ್ಟ ಫಲಿತಾಂಶ ಸಾಧಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯೂ ಫಲಿತಾಂಶ ಹೆಚ್ಚಿಸಿಕೊಂಡಿದ್ದು ಶೇ.85.06 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಈ ಬಾರಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಅಸಾಧಾರಣ ಸಾಧನೆ ಮಾಡಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಈ ಸಾಧನೆ ಮಾಡಿದವರು.
ಕಳೆದ 2024-25ನೇ ಸಾಲಿನಲ್ಲಿ 80.04 ಶೇ. ಫಲಿತಾಂಶ ಬಂದಿದ್ದರೆ, ಈ ಬಾರಿ 94.1 ಶೇ. ಫಲಿತಾಂಶ ಬಂದಿದೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದು, 96.18 ಶೇ. ಪಾಸ್ ಆಗಿದ್ದು ಬಾಲಕರು 91.94 ಶೇ. ಮಂದಿ ಪಾಸ್ ಆಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ 93.97 ಶೇ. ಫಲಿತಾಂಶ ಆಗಿದ್ದರೆ, ಅನುದಾನಿತ ಶಾಲೆಗಳಲ್ಲಿ 92.44 ಶೇ. ಮತ್ತು ಅನುದಾನ ರಹಿತ ಶಾಲೆಗಳಲ್ಲಿ 95.40 ಶೇ. ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಪ್ರಥಮ ಭಾಷೆಯಲ್ಲಿ 97.24 ಶೇ., ದ್ವಿತೀಯ ಭಾಷೆಯಲ್ಲಿ 98.13 ಶೇ., ತೃತೀಯ ಭಾಷೆಯಲ್ಲಿ 98.55 ಶೇ. ಮಂದಿ ತೇರ್ಗಡೆಯಾಗಿದ್ದಾರೆ. ಗಣಿತ 97.98, ವಿಜ್ಞಾನ 97.80, ಸಮಾಜ ವಿಜ್ಞಾನ 97.85 ಶೇ. ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 625ಕ್ಕೆ 625 ಅಂಕವನ್ನು ಏಳು, 624 ಅಂಕ -21 ಮಂದಿ, 623-28 ಮಂದಿ, 622 -74 ಮಂದಿ, 621-98 ಮಂದಿ, 620 ಅಂಕಗಳೊಂದಿಗೆ 150 ಮಂದಿ ಪಾಸ್ ಆಗಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm