ಬ್ರೇಕಿಂಗ್ ನ್ಯೂಸ್
24-04-26 10:52 pm HK News Staffer ಕರ್ನಾಟಕ
ಕಾರವಾರ, ಏಪ್ರಿಲ್ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಫೇಲ್ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಗುರುವಾರ ಪ್ರಕಟವಾದ ಅಧಿಕೃತ ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ‘ಗೈರು’ ಎಂದು ನಮೂದಾಗಿದ್ದ ಕಾರಣ ಲೀಸಾ ಫೇಲ್ ಎಂದು ತೋರಿಸಲಾಗಿತ್ತು. ಆದರೆ ಇಂದು ಹೊರಬಂದ ಮತ್ತೊಂದು ಫಲಿತಾಂಶದಲ್ಲಿ ಆಕೆ ಶಾಲೆಯ ಟಾಪರ್ ಎಂದು ಹೇಳಲಾಗುತ್ತಿದೆ.
ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದರೂ ಪರೀಕ್ಷಾ ಪ್ರಾಧಿಕಾರದ ತಪ್ಪಿನಿಂದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ದಾಖಲಾಗಿತ್ತು. ಇದರ ಪರಿಣಾಮವಾಗಿ 84.16% ಅಂಕ ಗಳಿಸಿದ್ದರೂ ಕೂಡ ಆಕೆಯ ಫಲಿತಾಂಶ ಫೇಲ್ ಎಂದು ಪ್ರಕಟವಾಗಿತ್ತು.
ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಲಾಗಿದ್ದು, ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದೇ ವಿಷಯದಲ್ಲಿ ಲೀಸಾಗೆ 97 ಅಂಕಗಳು ಬಂದಿದ್ದು, ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿರಸಿ ಡಿಡಿಪಿಐ, ಪ್ರಸ್ತುತ ಹರಿದಾಡುತ್ತಿರುವ ಫಲಿತಾಂಶ ಅಧಿಕೃತ ಪ್ರತಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೇಪರ್ ಮಿಸ್ ಆಗಿರುವುದು ನಿಜವಾಗಿದ್ದು, ಅದರ ಪರಿಶೀಲನೆ ಇನ್ನೂ ಮುಂದುವರಿದಿದೆ. ಅಂತಿಮ ಅಧಿಕೃತ ಫಲಿತಾಂಶ ಪ್ರಕಟಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯ ಭವಿಷ್ಯ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆ ಎದ್ದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm