ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm