ಬ್ರೇಕಿಂಗ್ ನ್ಯೂಸ್
30-04-26 11:53 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಹಲವು ಜಿಲ್ಲೆಗಳು ಇಂದು ಮತ್ತು ನಾಳೆ ವರುಣನ ಅಬ್ಬರಕ್ಕೆ ಸಿದ್ಧವಾಗುತ್ತಿದ್ದು, ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಮತ್ತು ತೇವಾಂಶ ಮುಂದುವರಿದರೂ, ಕೆಲವು ಕಡೆ ಗುಡುಗು-ಮಿಂಚಿನ ಆರ್ಭಟ ಮಾತ್ರ ಕಂಡುಬರುವ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ಚಾಮರಾಜನಗರ ಹಾಗೂ ಮೇ 1ರಂದು ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಸಂಜೆ ಸುರಿದ ಮಳೆಯಲ್ಲಿ ಒಟ್ಟು 111.5 ಮಿಮೀ ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 75 ಕಿ.ಮೀ. ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ 36-39 ಡಿಗ್ರಿವರೆಗೆ ಏರಿದ್ದ ಉಷ್ಣಾಂಶಕ್ಕೆ ಇದರಿಂದ ತಾತ್ಕಾಲಿಕ ತಣ್ಣನೆಯ ವಾತಾವರಣ ಉಂಟಾಗಿದೆ.
ಹವಾಮಾನ ತಜ್ಞರ ಪ್ರಕಾರ, ಹೆಚ್ಚಿದ ತಾಪಮಾನದಿಂದ ಉಂಟಾದ ಸಂವಹನ ಪ್ರಕ್ರಿಯೆ (ಕನ್ವೆಕ್ಟಿವ್ ಆಕ್ಟಿವಿಟಿ), ಕೆಳಮಟ್ಟದ ಗಾಳಿಯ ಅಸ್ಥಿರತೆ ಮತ್ತು ತೇವಾಂಶದ ಸಂಯೋಜನೆಯೇ ಆಲಿಕಲ್ಲು ಮಳೆಯ ಪ್ರಮುಖ ಕಾರಣವಾಗಿದೆ.
ಇದರ ಜೊತೆಗೆ ಕೇರಳ ರಾಜ್ಯದಲ್ಲೂ ಮುಂದಿನ ನಾಲ್ಕು ದಿನಗಳವರೆಗೆ ಬೇಸಿಗೆ ಮಳೆಯ ಸಾಧ್ಯತೆ ಇದ್ದು, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ. ವಿದ್ಯುತ್ ಕಂಬಗಳು, ಮರಗಳು ಮತ್ತು ನೀರು ತುಂಬಿದ ಪ್ರದೇಶಗಳಿಂದ ದೂರವಿರುವುದು ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm