ಬ್ರೇಕಿಂಗ್ ನ್ಯೂಸ್
30-04-26 11:53 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಹಲವು ಜಿಲ್ಲೆಗಳು ಇಂದು ಮತ್ತು ನಾಳೆ ವರುಣನ ಅಬ್ಬರಕ್ಕೆ ಸಿದ್ಧವಾಗುತ್ತಿದ್ದು, ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಮತ್ತು ತೇವಾಂಶ ಮುಂದುವರಿದರೂ, ಕೆಲವು ಕಡೆ ಗುಡುಗು-ಮಿಂಚಿನ ಆರ್ಭಟ ಮಾತ್ರ ಕಂಡುಬರುವ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ಚಾಮರಾಜನಗರ ಹಾಗೂ ಮೇ 1ರಂದು ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಸಂಜೆ ಸುರಿದ ಮಳೆಯಲ್ಲಿ ಒಟ್ಟು 111.5 ಮಿಮೀ ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 75 ಕಿ.ಮೀ. ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ 36-39 ಡಿಗ್ರಿವರೆಗೆ ಏರಿದ್ದ ಉಷ್ಣಾಂಶಕ್ಕೆ ಇದರಿಂದ ತಾತ್ಕಾಲಿಕ ತಣ್ಣನೆಯ ವಾತಾವರಣ ಉಂಟಾಗಿದೆ.
ಹವಾಮಾನ ತಜ್ಞರ ಪ್ರಕಾರ, ಹೆಚ್ಚಿದ ತಾಪಮಾನದಿಂದ ಉಂಟಾದ ಸಂವಹನ ಪ್ರಕ್ರಿಯೆ (ಕನ್ವೆಕ್ಟಿವ್ ಆಕ್ಟಿವಿಟಿ), ಕೆಳಮಟ್ಟದ ಗಾಳಿಯ ಅಸ್ಥಿರತೆ ಮತ್ತು ತೇವಾಂಶದ ಸಂಯೋಜನೆಯೇ ಆಲಿಕಲ್ಲು ಮಳೆಯ ಪ್ರಮುಖ ಕಾರಣವಾಗಿದೆ.
ಇದರ ಜೊತೆಗೆ ಕೇರಳ ರಾಜ್ಯದಲ್ಲೂ ಮುಂದಿನ ನಾಲ್ಕು ದಿನಗಳವರೆಗೆ ಬೇಸಿಗೆ ಮಳೆಯ ಸಾಧ್ಯತೆ ಇದ್ದು, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ. ವಿದ್ಯುತ್ ಕಂಬಗಳು, ಮರಗಳು ಮತ್ತು ನೀರು ತುಂಬಿದ ಪ್ರದೇಶಗಳಿಂದ ದೂರವಿರುವುದು ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm