ಬ್ರೇಕಿಂಗ್ ನ್ಯೂಸ್
30-04-26 11:53 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಹಲವು ಜಿಲ್ಲೆಗಳು ಇಂದು ಮತ್ತು ನಾಳೆ ವರುಣನ ಅಬ್ಬರಕ್ಕೆ ಸಿದ್ಧವಾಗುತ್ತಿದ್ದು, ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಮತ್ತು ತೇವಾಂಶ ಮುಂದುವರಿದರೂ, ಕೆಲವು ಕಡೆ ಗುಡುಗು-ಮಿಂಚಿನ ಆರ್ಭಟ ಮಾತ್ರ ಕಂಡುಬರುವ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ಚಾಮರಾಜನಗರ ಹಾಗೂ ಮೇ 1ರಂದು ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಸಂಜೆ ಸುರಿದ ಮಳೆಯಲ್ಲಿ ಒಟ್ಟು 111.5 ಮಿಮೀ ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 75 ಕಿ.ಮೀ. ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ 36-39 ಡಿಗ್ರಿವರೆಗೆ ಏರಿದ್ದ ಉಷ್ಣಾಂಶಕ್ಕೆ ಇದರಿಂದ ತಾತ್ಕಾಲಿಕ ತಣ್ಣನೆಯ ವಾತಾವರಣ ಉಂಟಾಗಿದೆ.
ಹವಾಮಾನ ತಜ್ಞರ ಪ್ರಕಾರ, ಹೆಚ್ಚಿದ ತಾಪಮಾನದಿಂದ ಉಂಟಾದ ಸಂವಹನ ಪ್ರಕ್ರಿಯೆ (ಕನ್ವೆಕ್ಟಿವ್ ಆಕ್ಟಿವಿಟಿ), ಕೆಳಮಟ್ಟದ ಗಾಳಿಯ ಅಸ್ಥಿರತೆ ಮತ್ತು ತೇವಾಂಶದ ಸಂಯೋಜನೆಯೇ ಆಲಿಕಲ್ಲು ಮಳೆಯ ಪ್ರಮುಖ ಕಾರಣವಾಗಿದೆ.
ಇದರ ಜೊತೆಗೆ ಕೇರಳ ರಾಜ್ಯದಲ್ಲೂ ಮುಂದಿನ ನಾಲ್ಕು ದಿನಗಳವರೆಗೆ ಬೇಸಿಗೆ ಮಳೆಯ ಸಾಧ್ಯತೆ ಇದ್ದು, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ. ವಿದ್ಯುತ್ ಕಂಬಗಳು, ಮರಗಳು ಮತ್ತು ನೀರು ತುಂಬಿದ ಪ್ರದೇಶಗಳಿಂದ ದೂರವಿರುವುದು ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 12:31 pm
HK News Staffer
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm