ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm