ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm