ಬ್ರೇಕಿಂಗ್ ನ್ಯೂಸ್
02-05-26 04:48 pm HK News Staffer ಕರ್ನಾಟಕ
ತುಮಕೂರು, ಮೇ 2: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ತೀವ್ರ ಬಿಸಿಲಿನಿಂದ ನವಿಲುಗಳು ಸಾವನ್ನಪ್ಪಿದ್ದಾಗಿ ಹೇಳಲಾಗಿತ್ತು. ಆದರೆ ಪ್ರಯೋಗಾಲಯದ ವರದಿಗಳು ನವಿಲುಗಳ ಸಾವಿಗೆ ಹಕ್ಕಿಜ್ವರ (H5N1) ಸೋಂಕು ಕಾರಣ ಎಂದು ಹೇಳಿವೆ. ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ 44 ನವಿಲು ಸಾವನ್ನಪ್ಪಿದ್ದು ಭಾರೀ ಆತಂಕಕ್ಕೀಡು ಮಾಡಿತ್ತು.
ಏಪ್ರಿಲ್ 16ರಿಂದ 24ರ ನಡುವೆ, ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಗ್ರಾಮಗಳಲ್ಲಿ ನವಿಲುಗಳ ಸಾವು ವರದಿಯಾಗಿತ್ತು. ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಕೃಷಿ ಹೊಲಗಳಲ್ಲಿ ನವಿಲುಗಳ ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದರು. ತೀವ್ರ ಬಿಸಿಲಿನ ಕಾರಣದಿಂದ ಸಾವು ಆಗಿರುವುದಾಗಿ ಅಧಿಕಾರಿಗಳು ಸಮಜಾಯಿಷಿ ನೀಡಿದ್ದರು.
ಆದರೆ ಮೃತ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿ H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯೋಗಾಲಯದ ವರದಿಗಳು, H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸೋಂಕು ಹರಡುವುದನ್ನು ತಪ್ಪಿಸಲು ತುಮಕೂರು ಜಿಲ್ಲಾಡಳಿತವು 33 ಗ್ರಾಮಗಳಲ್ಲಿ ಅಲರ್ಟ್ ಸೂಚನೆ ನೀಡಿದೆ. ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm