ಬ್ರೇಕಿಂಗ್ ನ್ಯೂಸ್
02-05-26 04:48 pm HK News Staffer ಕರ್ನಾಟಕ
ತುಮಕೂರು, ಮೇ 2: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ತೀವ್ರ ಬಿಸಿಲಿನಿಂದ ನವಿಲುಗಳು ಸಾವನ್ನಪ್ಪಿದ್ದಾಗಿ ಹೇಳಲಾಗಿತ್ತು. ಆದರೆ ಪ್ರಯೋಗಾಲಯದ ವರದಿಗಳು ನವಿಲುಗಳ ಸಾವಿಗೆ ಹಕ್ಕಿಜ್ವರ (H5N1) ಸೋಂಕು ಕಾರಣ ಎಂದು ಹೇಳಿವೆ. ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ 44 ನವಿಲು ಸಾವನ್ನಪ್ಪಿದ್ದು ಭಾರೀ ಆತಂಕಕ್ಕೀಡು ಮಾಡಿತ್ತು.
ಏಪ್ರಿಲ್ 16ರಿಂದ 24ರ ನಡುವೆ, ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಗ್ರಾಮಗಳಲ್ಲಿ ನವಿಲುಗಳ ಸಾವು ವರದಿಯಾಗಿತ್ತು. ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಕೃಷಿ ಹೊಲಗಳಲ್ಲಿ ನವಿಲುಗಳ ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದರು. ತೀವ್ರ ಬಿಸಿಲಿನ ಕಾರಣದಿಂದ ಸಾವು ಆಗಿರುವುದಾಗಿ ಅಧಿಕಾರಿಗಳು ಸಮಜಾಯಿಷಿ ನೀಡಿದ್ದರು.
ಆದರೆ ಮೃತ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿ H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯೋಗಾಲಯದ ವರದಿಗಳು, H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸೋಂಕು ಹರಡುವುದನ್ನು ತಪ್ಪಿಸಲು ತುಮಕೂರು ಜಿಲ್ಲಾಡಳಿತವು 33 ಗ್ರಾಮಗಳಲ್ಲಿ ಅಲರ್ಟ್ ಸೂಚನೆ ನೀಡಿದೆ. ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm