ಬ್ರೇಕಿಂಗ್ ನ್ಯೂಸ್
04-05-26 07:16 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 4: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುವಾಗಿದ್ದು ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಗೆಲುವಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ. 52 ಮತಗಳ ಮುನ್ನಡೆಯೊಂದಿಗೆ, ಡಿಎನ್ ಜೀವರಾಜ್ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಪ್ರಿಲ್ 6ರಂದು ಪೋಸ್ಟಲ್ ಬ್ಯಾಲೆಟ್ಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಈ ಪ್ರಕ್ರಿಯೆ ಆರಂಭವಾಗಿ ಮಧ್ಯರಾತ್ರಿ ವರೆಗೂ ಮುಂದುವರಿಯಿತು. ಮರು ಪರಿಶೀಲನೆ ವೇಳೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ.
ಜೀವರಾಜ್ ಅವರಿಗೆ ಮೊದಲು 692 ಮತಗಳು ಇದ್ದರೆ, ಮರು ಎಣಿಕೆಯಲ್ಲಿ 690 ಮಾನ್ಯ ಮತಗಳು ಲಭ್ಯವಾಗಿವೆ. ಆದರೆ, ರಾಜೇಗೌಡರ ಮತಗಳು 569ರಿಂದ ನೇರವಾಗಿ 314ಕ್ಕೆ ಇಳಿದಿದ್ದು, 255 ಮತಗಳ ಕಡಿತ ಕಂಡುಬಂದಿದೆ. ಈ ದೊಡ್ಡ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ.
ಫಲಿತಾಂಶ ಬೆನ್ನಲ್ಲೇ ಚುನಾವಣಾಧಿಕಾರಿಗಳು ಜನಪ್ರತಿನಿಧಿತ್ವ ಕಾಯ್ದೆ 1951 ಮತ್ತು ಚುನಾವಣಾ ನಿಯಮಾವಳಿಗಳ ಪ್ರಕಾರ ಜೀವರಾಜ್ ಅವರನ್ನು ಅಧಿಕೃತವಾಗಿ ಶಾಸಕರಾಗಿ ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ರಾಜೇಗೌಡರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಗೌಡರು ಮರು ಎಣಿಕೆ ಪ್ರಕ್ರಿಯೆ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಪರವಾಗಿ ಬಂದಿದ್ದ ಕೆಲವು ಬ್ಯಾಲೆಟ್ಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm