ಬ್ರೇಕಿಂಗ್ ನ್ಯೂಸ್
04-05-26 10:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 04: ಬಾತುಕೋಳಿ ಹಿಡಿಯಲು ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ. ಮಕ್ಕಳು ಮೃತಪಟ್ಟಿರುವ ಘಟನೆ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂಬ ನಾಲ್ವರು ಮಕ್ಕಳು ಮೃತಪಟ್ಟವರಾಗಿದ್ದು, ಇವರು ಎಲ್ಲರೂ 5 ರಿಂದ 12 ವರ್ಷದೊಳಗಿನವರಾಗಿದ್ದಾರೆ.
ಇದೇ ವೇಳೆ ನಾಲ್ಕು ವರ್ಷದ ಅರ್ಮಾನ್ ಎಂಬ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾನೆ. ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪೊಲೀಸರು ತಿಳಿಸಿದ್ದು ಹೀಗೆ: ಸಂಬಂಧಿಕರ ಮನೆಗೆ ಬಂದಿದ್ದ ಮಕ್ಕಳು ಆಟವಾಡುತ್ತಿದ್ದ ವೇಳೆ ಬಾತುಕೋಳಿ ಕೆರೆಗೆ ಹೋಗಿರುವುದನ್ನು ನೋಡಿ ಅದನ್ನು ಹಿಡಿಯಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ಆಳವಾದ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಘಟನೆ ತಿಳಿದ ತಕ್ಷಣ ಸ್ಥಳೀಯರು ಹಾಗೂ ಪೋಷಕರು ಕೆರೆಗೆ ಧಾವಿಸಿ ಮಕ್ಕಳನ್ನು ರಕ್ಷಿಸಲು ಯತ್ನಿಸಿದರೂ ಫಲಕಾರಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದು, ಎಲ್ಲಾ ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಹಾಗೂ ಕುಟುಂಬದ ಸದಸ್ಯರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ನಾಲ್ವರು ಮಕ್ಕಳನ್ನು ಕಳೆದುಕೊಂಡ ಕುಟುಂಬ ಸದಸ್ಯರಲ್ಲಿ ದುಃಖ ಮಡುಗಟ್ಟಿದೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರಿಕೆ ಅಗತ್ಯವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am