ಬ್ರೇಕಿಂಗ್ ನ್ಯೂಸ್
08-05-26 12:21 pm HK News Staffer ಕರ್ನಾಟಕ
ಕಲಬುರಗಿ, ಮೇ 8: ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ವಿವಿಧ ಕಂಪನಿಗಳ ಸುಮಾರು 1 ಕೋಟಿ 44 ಲಕ್ಷ 90 ಸಾವಿರ ರೂ. ಮೌಲ್ಯದ 785 ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಿ, ಅವುಗಳನ್ನು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಕಳೆದುಹೋಗಿದ್ದ ಮೊಬೈಲ್ಗಳ ಕುರಿತು ‘ಇ-ಲಾಸ್ಟ್’ ಹಾಗೂ ‘ಸಿಇಐಆರ್’ ಪೋರ್ಟಲ್ನಲ್ಲಿ ದಾಖಲಾಗಿದ್ದ ದೂರುಗಳ ಆಧಾರದಲ್ಲಿ ‘ಆಪರೇಷನ್ ಭರವಸೆ’ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ವಿವಿಧ ರಾಜ್ಯಗಳಲ್ಲೂ ಕಾರ್ಯಾಚರಣೆ
ಪತ್ತೆಯಾದ 785 ಮೊಬೈಲ್ಗಳ ಪೈಕಿ ಕರ್ನಾಟಕದಲ್ಲೇ 688 ಮೊಬೈಲ್ಗಳು ದೊರೆತಿವೆ. ಅದರಲ್ಲೂ ಕಲಬುರಗಿ ನಗರದಲ್ಲೇ ಅತಿ ಹೆಚ್ಚು 487 ಮೊಬೈಲ್ಗಳು ಪತ್ತೆಯಾಗಿವೆ. ವಿಜಯಪುರದಲ್ಲಿ 20, ಬೀದರ್ನಲ್ಲಿ 18, ಬೆಂಗಳೂರಿನಲ್ಲಿ 17, ಯಾದಗಿರಿಯಲ್ಲಿ 16, ರಾಯಚೂರಿನಲ್ಲಿ 12, ವಿಜಯನಗರದಲ್ಲಿ 8 ಹಾಗೂ ಬಳ್ಳಾರಿಯಲ್ಲಿ 7 ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಹೊರಗೂ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರದಲ್ಲಿ 41, ತೆಲಂಗಾಣದಲ್ಲಿ 23, ಆಂಧ್ರ ಪ್ರದೇಶದಲ್ಲಿ 23, ಬಿಹಾರದಲ್ಲಿ 7 ಮತ್ತು ಉತ್ತರ ಪ್ರದೇಶದಲ್ಲಿ 3 ಮೊಬೈಲ್ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ಸಲಹೆ
ಮೊಬೈಲ್ಗಳ ಸುರಕ್ಷತೆಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ ಪೊಲೀಸ್ ಆಯುಕ್ತರು, ಮೊಬೈಲ್ಗಳಿಗೆ ಕಡ್ಡಾಯವಾಗಿ ಬಲವಾದ ಪಾಸ್ವರ್ಡ್ ಅಥವಾ ಥಂಬ್ ಲಾಕ್ ಅಳವಡಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ‘Find My Device’ ಸೌಲಭ್ಯವನ್ನು ಸಕ್ರಿಯವಾಗಿಡಬೇಕು ಎಂದರು.
ಮೊಬೈಲ್ ಕಳೆದುಹೋದ ತಕ್ಷಣವೇ ‘ಇ-ಲಾಸ್ಟ್’ ಅಥವಾ ‘CEIR’ ಪೋರ್ಟಲ್ನಲ್ಲಿ ದೂರು ದಾಖಲಿಸಿದರೆ, ಫೋನ್ ದುರ್ಬಳಕೆ ತಡೆಯಲು ಹಾಗೂ ಪೊಲೀಸರು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಡಿಮೆ ಬೆಲೆಯ ಮೊಬೈಲ್ ಖರೀದಿಸುವ ಮುನ್ನ ಎಚ್ಚರ!
ದಾಖಲೆಗಳಿಲ್ಲದೇ ಕಡಿಮೆ ಬೆಲೆಗೆ ಮಾರಾಟವಾಗುವ ಮೊಬೈಲ್ಗಳನ್ನು ಖರೀದಿಸಬಾರದು ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತರು ಮಾರಾಟ ಮಾಡುವ ಫೋನ್ಗಳು ಕಳ್ಳತನದ ವಸ್ತುಗಳಾಗಿರುವ ಸಾಧ್ಯತೆ ಇರುವುದರಿಂದ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದಾರೆ.
‘ಸಾರ್ವಜನಿಕರು ಮೊಬೈಲ್ ಫೋನ್ಗಳನ್ನು ಕಳೆದುಕೊಂಡಾಗ ಕಡ್ಡಾಯವಾಗಿ ಇ–ಲಾಸ್ಟ್/ ಸಿಇಐಆರ್ ಪೋರ್ಟಲ್ನಲ್ಲಿ ದೂರು ದಾಖಲಿಸಬೇಕು. ಬಸ್, ರೈಲು ನಿಲ್ದಾಣ ಸೇರಿದಂತೆ ಯಾವುದೇ ಕಡೆಗಳಲ್ಲಿ ದಾಖಲೆಗಳು ಇಲ್ಲದ, ಕಡಿಮೆ ಬೆಲೆಗೆ ಸಿಗುವ ಮೊಬೈಲ್ ಫೋನ್ಗಳನ್ನು ಖರೀದಿಸಬೇಡಿ. ಅಪರಿಚಿತರು ಮಾರುವ ಮೊಬೈಲ್ಗಳು, ಕದ್ದ ವಸ್ತುಗಳಾಗಬಹುದು. ಇವುಗಳಿದ ಜನರು ಎಚ್ಚರಿಕೆಯಿಂದಿರಬೇಕು.
ಡಾ.ಶರಣಪ್ಪ ಎಸ್.ಡಿ
ಪೊಲೀಸ್ ಕಮೀಷನರ್, ಕಲಬುರಗಿ
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am