ಬ್ರೇಕಿಂಗ್ ನ್ಯೂಸ್
08-05-26 08:05 pm HK News Staffer ಕರ್ನಾಟಕ
ಹೈದರಾಬಾದ್, ಮೇ 8: ತೆಲಂಗಾಣದಲ್ಲಿ 12ನೇ ಶತಮಾನದಲ್ಲಿ ಸ್ಥಾಪಿಸಿದ್ದು ಎನ್ನಲಾದ ಕಾಕತೀಯರ ಕಾಲದ ಪುರಾತನ ಶಿವ ದೇವಾಲಯವನ್ನು ಶಾಲಾ ಮೈದಾನಕ್ಕಾಗಿ ಧ್ವಂಸಗೊಳಿಸಲಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದೆ.
ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. 800 ವರ್ಷಗಳ ಇತಿಹಾಸದ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ಸಾರ್ವಜನಿಕರು, ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಮೈದಾನಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ವೇಳೆ ಜೆಸಿಬಿ ಬಳಸಿ ಹಳೆಯ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಶಿವ ದೇವಾಲಯ 13ನೇ ಶತಮಾನದ ಕಾಕತೀಯರ ದೊರೆ ಗಣಪತಿ ದೇವನ ಕಾಲದಲ್ಲಿ ನಿರ್ಮಾಣವಾಗಿತ್ತು. ಕ್ರಿ.ಶ. 1231ರಲ್ಲಿ ಬರೆದ ಏಳು ಸಾಲುಗಳ ತೆಲುಗು ಶಾಸನವೂ ಇದೇ ದೇವಾಲಯದಲ್ಲಿ ದೊರಕಿತ್ತು. ಅದರಲ್ಲಿ ರಾಜನನ್ನು 'ಮಹಾರಾಜ' ಮತ್ತು 'ರಾಜಾಧಿರಾಜುಲು' ಎಂದು ಕರೆಯಲಾಗಿತ್ತು. ಇದನ್ನು ಗುರುತಿಸಿ 1965ರಲ್ಲಿ ರಾಜ್ಯದ ಪುರಾತತ್ವ ಮತ್ತು ಮುಜರಾಯಿ ಇಲಾಖೆಗೆ ಸೇರಿಸಲಾಗಿತ್ತು.
ಸಾರ್ವಜನಿಕರ ಪ್ರತಿಭಟನೆ ಮತ್ತು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರಕ್ಕೆ ಕೆಲವರು ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳು ದೇಗುಲ ಮರು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬೇಕೆಂದೇ ದೇವಾಲಯವನ್ನು ನಾವು ಧ್ವಂಸ ಮಾಡಿಲ್ಲ. 30 ಎಕರೆ ಜಾಗದಲ್ಲಿ ಪೊದೆಗಳನ್ನು ಸ್ವಚ್ಛಗೊಳಿಸುವಾಗ ಶಿಥಿಲಗೊಂಡ ದೇವಾಲಯ ನೆಲಸಮ ಆಗಿದೆ. ಇದೇನೂ ಅಧಿಕೃತವಾಗಿ ರಕ್ಷಿತ ಸ್ಮಾರಕ ಎಂದು ದಾಖಲೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ವಾದಿಸಿದ್ದಾರೆ. ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ದೇಗುಲ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm