ಬ್ರೇಕಿಂಗ್ ನ್ಯೂಸ್
08-05-26 08:05 pm HK News Staffer ಕರ್ನಾಟಕ
ಹೈದರಾಬಾದ್, ಮೇ 8: ತೆಲಂಗಾಣದಲ್ಲಿ 12ನೇ ಶತಮಾನದಲ್ಲಿ ಸ್ಥಾಪಿಸಿದ್ದು ಎನ್ನಲಾದ ಕಾಕತೀಯರ ಕಾಲದ ಪುರಾತನ ಶಿವ ದೇವಾಲಯವನ್ನು ಶಾಲಾ ಮೈದಾನಕ್ಕಾಗಿ ಧ್ವಂಸಗೊಳಿಸಲಾಗಿದ್ದು ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ವಿವಾದಕ್ಕೆ ಕಾರಣವಾಗಿದೆ.
ವಾರಂಗಲ್ ಜಿಲ್ಲೆಯ ಖಾನಾಪುರ ಮಂಡಲದ ಅಶೋಕ ನಗರದಲ್ಲಿ ಈ ಘಟನೆ ನಡೆದಿದೆ. 800 ವರ್ಷಗಳ ಇತಿಹಾಸದ ದೇವಾಲಯವನ್ನು ಧ್ವಂಸ ಮಾಡಿರುವುದಕ್ಕೆ ಸಾರ್ವಜನಿಕರು, ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಯ ನೂತನ ಕಟ್ಟಡ ಮತ್ತು ಮೈದಾನಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ವೇಳೆ ಜೆಸಿಬಿ ಬಳಸಿ ಹಳೆಯ ಪಾಳು ಬಿದ್ದ ಸ್ಥಿತಿಯಲ್ಲಿದ್ದ ಶಿವ ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಶಿವ ದೇವಾಲಯ 13ನೇ ಶತಮಾನದ ಕಾಕತೀಯರ ದೊರೆ ಗಣಪತಿ ದೇವನ ಕಾಲದಲ್ಲಿ ನಿರ್ಮಾಣವಾಗಿತ್ತು. ಕ್ರಿ.ಶ. 1231ರಲ್ಲಿ ಬರೆದ ಏಳು ಸಾಲುಗಳ ತೆಲುಗು ಶಾಸನವೂ ಇದೇ ದೇವಾಲಯದಲ್ಲಿ ದೊರಕಿತ್ತು. ಅದರಲ್ಲಿ ರಾಜನನ್ನು 'ಮಹಾರಾಜ' ಮತ್ತು 'ರಾಜಾಧಿರಾಜುಲು' ಎಂದು ಕರೆಯಲಾಗಿತ್ತು. ಇದನ್ನು ಗುರುತಿಸಿ 1965ರಲ್ಲಿ ರಾಜ್ಯದ ಪುರಾತತ್ವ ಮತ್ತು ಮುಜರಾಯಿ ಇಲಾಖೆಗೆ ಸೇರಿಸಲಾಗಿತ್ತು.
ಸಾರ್ವಜನಿಕರ ಪ್ರತಿಭಟನೆ ಮತ್ತು ರಾಷ್ಟ್ರೀಯ ಸ್ಮಾರಕಗಳ ಪ್ರಾಧಿಕಾರಕ್ಕೆ ಕೆಲವರು ದೂರು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸ್ಥಳೀಯ ಜಿಲ್ಲಾ ಮಟ್ಟದ ಅಧಿಕಾರಿಗಳು ದೇಗುಲ ಮರು ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. ಬೇಕೆಂದೇ ದೇವಾಲಯವನ್ನು ನಾವು ಧ್ವಂಸ ಮಾಡಿಲ್ಲ. 30 ಎಕರೆ ಜಾಗದಲ್ಲಿ ಪೊದೆಗಳನ್ನು ಸ್ವಚ್ಛಗೊಳಿಸುವಾಗ ಶಿಥಿಲಗೊಂಡ ದೇವಾಲಯ ನೆಲಸಮ ಆಗಿದೆ. ಇದೇನೂ ಅಧಿಕೃತವಾಗಿ ರಕ್ಷಿತ ಸ್ಮಾರಕ ಎಂದು ದಾಖಲೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ವಾದಿಸಿದ್ದಾರೆ. ಜನರ ಆಕ್ರೋಶ ಹೆಚ್ಚುತ್ತಿದ್ದಂತೆ ದೇಗುಲ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm