ಬ್ರೇಕಿಂಗ್ ನ್ಯೂಸ್
05-01-21 06:18 pm Bangalore Correspondent ಕರ್ನಾಟಕ
ಬೆಂಗಳೂರು, ಜ.5: ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ಸಿಗುವಂತಾಗಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸಿದೆ ಎಂದರು. ಇದೇ ವೇಳೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಕತ್ತಲ್ಸಾರ್ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ 15 ದಿನಗಳ ಒಳಗೆ ಈ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ಸಿಗಲಿದೆ. ಆನಂತರ ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತುಳು ಭಾಷೆಗೆ ಅಧಿಕೃತವಾಗಿ ರಾಜ್ಯ ಭಾಷೆ ಸ್ಥಾನ ಸಿಗಬೇಕು ಎಂಬ ಧ್ವನಿಗೆ ಸಚಿವರು ಸಹಮತ ವ್ಯಕ್ತಪಡಿಸಿದ್ದಾರೆ.
CM BS Yediyurappa assures on making Tulu as one of the State official Language said Dayananda G Kathalsar, president of Karnataka Tulu Sahitya Academy in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm