ಬ್ರೇಕಿಂಗ್ ನ್ಯೂಸ್
23-05-26 11:37 pm HK News Desk ಕರ್ನಾಟಕ
ಬೆಂಗಳೂರು, ಮೇ 23: ತಮಿಳುನಾಡಿನಲ್ಲಿ ಕಮಾಲ್ ಮಾಡಿರುವ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಪಕ್ಷವು ಕರ್ನಾಟಕ ರಾಜಕೀಯಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಬೆಂಗಳೂರು ಜಿಬಿಎ ಚುನಾವಣೆಯಲ್ಲಿ, ತಮಿಳು ಮತದಾರರು ಹೆಚ್ಚಿರುವ ವಾರ್ಡ್ಗಳಲ್ಲಿ ಸ್ಪರ್ಧಿಸಲು ವಿಜಯ್ ಯೋಜನೆ ರೂಪಿಸಿದ್ದಾರೆ.
'ಗ್ರೇಟರ್ ಬೆಂಗಳೂರು ಅಥಾರಿಟಿ' ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆಯೇ, ಟಿವಿಕೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಒಟ್ಟು 369 ವಾರ್ಡ್ಗಳ ಪೈಕಿ ಕನಿಷ್ಠ 50 ವಾರ್ಡ್ಗಳ ಮೇಲೆ ಹಿಡಿತ ಸಾಧಿಸುವುದು ವಿಜಯ್ ಅಭಿಮಾನಿಗಳ ಮತ್ತು ಪಕ್ಷದ ತಂತ್ರಗಾರಿಕೆಯಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ತಮಿಳು ಭಾಷಿಕ ಮತದಾರರು ಹೆಚ್ಚಿದ್ದು ಯಾವುದೇ ಪಕ್ಷದ ಗೆಲುವಿನಲ್ಲಿ ನಿರ್ಣಾಯಕವಾಗಿದ್ದಾರೆ. ಶ್ರೀರಾಮಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜಿಪುರ, ಮಡಿವಾಳ ಮತ್ತು ಶಾಂತಿನಗರದಂತಹ ವಾರ್ಡ್ಗಳಲ್ಲಿ ತಮಿಳು ಮತದಾರರ ಸಂಖ್ಯೆ ಹೆಚ್ಚಿದೆ. ಈ ವಾರ್ಡ್ಗಳನ್ನೇ ಗುರಿಯಾಗಿಸಿ ಟಿವಿಕೆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಈಗಾಗಲೇ ವಿಜಯ್ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ವಿಜಯ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲು ಕಾಯುತ್ತಿದ್ದಾರೆ.
ಬೆಂಗಳೂರಿನಲ್ಲಿ ದಳಪತಿ ವಿಜಯ್ಗೆ ಕೇವಲ ಸಿನಿಮಾ ಅಭಿಮಾನಿಗಳಲ್ಲದೆ, ಸಾಮಾಜಿಕವಾಗಿ ದೊಡ್ಡ ಅಭಿಮಾನಿ ಪಡೆಯೇ ಇದೆ. ವಿಜಯ್ ಸೂಚನೆಯಂತೆ ಈಗಾಗಲೇ ಹಲವು ಅಭಿಮಾನಿ ಸಂಘಗಳು ಜನಸೇವೆಯಲ್ಲಿ ತೊಡಗಿವೆ. ಅಭಿಮಾನಿಗಳನ್ನೇ ಪಕ್ಷದ ಅಭ್ಯರ್ಥಿಗಳನ್ನಾಗಿ ಮಾಡಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಂಡುಕೊಳ್ಳಲು ವಿಜಯ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm