ಬ್ರೇಕಿಂಗ್ ನ್ಯೂಸ್
26-05-26 08:51 pm HK News Staffer ಕರ್ನಾಟಕ
ಮೈಸೂರು, ಮೇ 25: ‘ಕಾಂತಾರ’ ಚಿತ್ರದ ಚಾವುಂಡಿ ದೈವದ ಪಾತ್ರದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಸನ್ನಿಧಿಯಲ್ಲಿ ಕ್ಷಮೆಯಾಚಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಯಾರಿಗೂ ತಿಳಿಯದಂತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ರಣವೀರ್ ಸಿಂಗ್ ವಿಶೇಷ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿ ಎದುರು ತಲೆಬಾಗಿ ಪ್ರಾರ್ಥನೆ ಸಲ್ಲಿಸಿರುವ ದೃಶ್ಯಗಳು ಇದೀಗ ವೈರಲ್ ಆಗುತ್ತಿವೆ. ದೇವಾಲಯದಲ್ಲಿ ಅವರು ಮೌನವಾಗಿ ಕುಳಿತು ಕ್ಷಮೆ ಕೇಳಿದ ಕ್ಷಣಗಳು ಸಾರ್ವಜನಿಕರ ಗಮನ ಸೆಳೆದಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ, ರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಈಗಾಗಲೇ ಕ್ಷಮೆ ಯಾಚಿಸಿದ್ದರು. ಜೊತೆಗೆ, ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು. ಇದೀಗ ಅವರು ಹೇಳಿದಂತೆ ನಡೆದುಕೋಂಡಿದ್ದಾರೆ.
ಘಟನೆ ಹಿನ್ನೆಲೆ:
ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಎದುರೇ ಮಾತನಾಡಿದ್ದ ರಣವೀರ್ ಸಿಂಗ್, ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ವೇಳೆ ದೈವದ ಪಾತ್ರವನ್ನು ಅನುಕರಿಸಿ ಮಾತನಾಡಿದ್ದರು. “ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯ ಅದ್ಭುತವಾಗಿತ್ತು” ಎಂದು ಹೇಳಿ, ಆ ಪಾತ್ರದ ಭಾವಭಂಗಿಯನ್ನು ಮಿಮಿಕ್ರಿ ಮಾಡಿದ್ದರು.
ರಣವೀರ್ ಸಿಂಗ್ ಅವರ ಈ ನಡೆಗೆ ಕರಾವಳಿ ಭಾಗದ ದೈವಾರಾಧಕರು ಹಾಗೂ ಹಲವಾರು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದಡಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈ ಬೆಳವಣಿಗೆಯ ಬಳಿಕ ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ನಟ ಕ್ಷಮೆಯಾಚಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm