ಬ್ರೇಕಿಂಗ್ ನ್ಯೂಸ್
28-05-26 06:18 pm HK News Staffer ಕರ್ನಾಟಕ
ಕಲಬುರಗಿ, ಮೇ 28: ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸುಡುವ ಬಿಸಿಲಿನಲ್ಲಿ ಜಮಾಯಿಸಿದ್ದ ಸಮುದಾಯದ ಜನರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಮೊಳಗಿಸಿದರು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಕೆಲಹೊತ್ತು ವಾಗ್ವಾದ ಜರುಗಿತು. ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರಗಳನ್ನು ಸುಟ್ಟು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಹಾಗೂ ಅವರ ಅಹಿಂದ ಬೆಂಬಲವೇ ಕಾರಣ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೇ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ್ ಎಸ್ ಪೂಜಾರಿ ಮಾತನಾಡಿ, ‘ರಾಜ್ಯಕ್ಕೆ ಗ್ಯಾರಂಟಿ ನೀಡಿ, ಅದನ್ನು ವ್ಯವಸ್ಥಿತವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಉದ್ದೇಶ ಏನು?. 2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿದ್ದಾರೆ ಎನ್ನುವ ಕಾರಣಕ್ಕೆ ಅಹಿಂದ ಸಮಾಜ ಶೇ 90ರಷ್ಟು ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ’ ಎಂದರು.
ಸಿದ್ದರಾಮಯ್ಯ 2004ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದಾಗ 58 ಶಾಸಕರು ಆಯ್ಕೆಯಾಗಿದ್ದರು. ಅದೇ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಹೊರ ಬಂದ ನಂತರ, ಈಗ ಕೇವಲ 18 ಶಾಸಕರಿಗೆ ಇಳಿದಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೇ 136 ಶಾಸಕರಿರುವ ಕಾಂಗ್ರೆಸ್ 2028ರಲ್ಲಿ ಕೇವಲ 36ಕ್ಕೆ ಇಳಿಯಲಿದೆ’ ಎಂದು ಆಕ್ರೋಶ ಹೊರಹಾಕಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm