ಬ್ರೇಕಿಂಗ್ ನ್ಯೂಸ್
29-05-26 04:30 pm HK News Staffer ಕರ್ನಾಟಕ
ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಹಿರಿಯ ನಾಯಕರು ತೆರೆಮರೆಯಲ್ಲಿ ಇದಕ್ಕಾಗಿ ಲಾಬಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದು, ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಸದ್ಯ ಚರ್ಚೆಯಲ್ಲಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಿ.ಪರಮೇಶ್ವರ, ಈಶ್ವರ ಖಂಡ್ರೆ ಹಾಗೂ ರಾಮಲಿಂಗಾ ರೆಡ್ಡಿ ಹೆಸರುಗಳು ಚರ್ಚೆಯಲ್ಲಿದ್ದರೂ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೆಸರೇ ಹೆಚ್ಚು ಚಾಲ್ತಿಯಲ್ಲುದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಅಹಿಂದ ನಾಯಕನಾಗಿರುವ ಜಾರಕಿಹೊಳಿ ಪಕ್ಷದಲ್ಲಿ ತನ್ನದೇ ವರ್ಚಸ್ಸು ಮತ್ತು ಸಿದ್ದರಾಮಯ್ಯ ಅವರ ಅಹಿಂದ ಉತ್ತರಾಧಿಕಾರಿ ಎನ್ನುವ ಹೆಗ್ಗಳಿಕೆ ಹೊಂದಿದ್ದಾರೆ. ಅವರನ್ನು ಪಕ್ಷದ ಸಾರಥಿಯನ್ನಾಗಿಸಲು ಹೈಕಮಾಂಡ್ ನಾಯಕರು ಕೂಡ ಆಸಕ್ತಿ ತೋರಿದ್ದಾರೆ. ಆದರೆ, ಈ ಪ್ರಕ್ರಿಯೆಯಲ್ಲಿ ಹೊಸ ಗೊಂದಲವೂ ಮೂಡಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಚಿವ ಸ್ಥಾನ ತ್ಯಜಿಸಬೇಕು ಎಂಬ ಹೈಕಮಾಂಡ್ ಸೂಚನೆ, ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಜಾರಿಗೊಳಿಸಲು ಮುಂದಾಗಿರುವುದಕ್ಕೆ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. 2023ರ ಚುನಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿದಿದ್ದರು. ಜಾರಕಿಹೊಳಿ ಬೆಂಬಲಿಗರು ಇದನ್ನೇ ಮುಂದಿಟ್ಟಿದ್ದು ಅಸಮಾನತೆಯ ಪ್ರಶ್ನೆ ಎಬ್ಬಿಸುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ‘ಒಬ್ಬರಿಗೆ ಒಂದು ಹುದ್ದೆ’ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಬಯಸುತ್ತಿದೆ ಎನ್ನಲಾಗಿದೆ. ಅಧಿಕಾರ ಮತ್ತು ಸಂಘಟನಾ ನಿಯಂತ್ರಣ ಒಬ್ಬರ ಕೈಯಲ್ಲಿ ಇರಬಾರದು ಎಂಬ ಅಭಿಪ್ರಾಯ ಹೈಕಮಾಂಡ್ನಲ್ಲಿ ಬಲವಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm