ಬ್ರೇಕಿಂಗ್ ನ್ಯೂಸ್
30-05-26 06:45 pm HK News Staffer ಕರ್ನಾಟಕ
ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸೂಚಿಸಿದ್ದು ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ನೀಡಲಾಯಿತು.
ಇದೇ ವೇಳೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ. ಕಂಠೀರವ, ವಿಧಾನಸೌಧ ಎದುರಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆಯೂ ಚರ್ಚೆಯಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಜೊತೆಗೆ 14 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಹಿರಿಯರು ಮತ್ತು ಹೊಸಬರ ಸಮ್ಮಿಳಿತ ಸಂಪುಟ ರಚನೆಗೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಮಾಣ ಸ್ವೀಕರಿಸುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಜೆ ಜಾರ್ಜ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್(ಮುನಿಯಪ್ಪ ಪುತ್ರಿ), ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ ಮತ್ತು ಎನ್.ಎ. ಹ್ಯಾರಿಸ್ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ.
ಕೆಲವು ಹಿರಿಯರನ್ನು ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಪಕ್ಷದ ಹೈಕಮಾಂಡ್ ನಲ್ಲಿ ಚರ್ಚೆಯಾಗಿದೆ. ಇದರಂತೆ, ಎಚ್.ಕೆ ಪಾಟೀಲ್, ಶಿವಾನಂದ ಪಾಟೀಲ್, ಕೆ.ಎಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ್ ಸೇರಿದಂತೆ ಕೆಲವು ಹಿರಿಯರನ್ನು ಕೈಬಿಡುವ ಸಾಧ್ಯತೆ ಇದೆ. ಕಾನೂನು ಸಚಿವರಾಗಿದ್ದ ಎಚ್.ಕೆ ಪಾಟೀಲ್ ಸ್ಪೀಕರ್ ಆಗುವ ಸಾಧ್ಯತೆ ಇದೆ. ಕಳೆದ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್ ಸಚಿವರಾಗಲಿದ್ದಾರೆ. ಎರಡನೇ ಹಂತದಲ್ಲಿ ಹೆಚ್ಚಿನ ಹೊಸಬರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm