ಬ್ರೇಕಿಂಗ್ ನ್ಯೂಸ್
03-06-26 12:44 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಭವನದಲ್ಲಿ ಡೆಪ್ಯುಟಿ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಖಾದರ್, ನೂತನ ಸಚಿವ ಸಂಪುಟ ಸೇರ್ಪಡೆಗೆ ಅಧಿಕೃತ ಸಿದ್ಧತೆ ಆರಂಭಿಸಿದ್ದಾರೆ.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಕರೆ ಬಂದ ಬೆನ್ನಲ್ಲೇ ಖಾದರ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯಪಾಲರಿಗೆ ಕೃತಜ್ಞತೆ ;
ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಯು.ಟಿ. ಖಾದರ್ ಕೃತಜ್ಞತೆ ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಕುರಿತು ಮಾಹಿತಿ ನೀಡಿದ್ದು, ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ
ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಯು.ಟಿ. ಖಾದರ್, ಯಾವುದೇ ನಿರ್ದಿಷ್ಟ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದು, “ನಾನು ಯಾವುದೇ ಖಾತೆಗಾಗಿ ಒತ್ತಡ ಹಾಕಿಲ್ಲ. ಆರೋಗ್ಯ ಖಾತೆ ಅಥವಾ ವಸತಿ ಖಾತೆ ಸಿಕ್ಕರೆ ಸಂತೋಷ. ಆದರೆ ಪಕ್ಷದ ನಾಯಕರು ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಉಪಮುಖ್ಯಮಂತ್ರಿ ಸ್ಥಾನ ಕೊಟ್ಟರೂ ನಿರ್ವಹಿಸಲು ಸಿದ್ಧನಿದ್ದೇನೆ. ಕ್ರಿಕೆಟ್ನಲ್ಲಿ ಯಾವ ಬಾಲ್ ಬಂದರೂ ಬ್ಯಾಟಿಂಗ್ ಮಾಡುವಂತೆ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ” ಎಂದು ಹೇಳಿದರು.



ಆರೋಗ್ಯ ಖಾತೆ ಸಿಗುವ ಸಾಧ್ಯತೆ ?
ಈ ಹಿಂದೆ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಅನುಭವ ಹೊಂದಿರುವ ಯು.ಟಿ. ಖಾದರ್ ಅವರಿಗೆ ಡಿಕೆ ಶಿವಕುಮಾರ್ ಸರ್ಕಾರದಲ್ಲೂ ಆರೋಗ್ಯ ಖಾತೆಯೇ ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಕೈಯಲ್ಲಿದ್ದು, ಅಧಿಕೃತ ಘೋಷಣೆಗಾಗಿ ಕಾದು ನೋಡಬೇಕಿದೆ.
ಬೆಂಬಲಿಗರ ಸಂಭ್ರಮಾಚರಣೆ ;
ಖಾದರ್ ಸಚಿವರಾಗುವುದು ಖಚಿತ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಅವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದರು. ಬೆಂಗಳೂರಿನ ಗಾಲ್ಫ್ ಗ್ರೌಂಡ್ ಸಮೀಪದ ಖಾದರ್ ನಿವಾಸಕ್ಕೆ ಆಗಮಿಸಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಹಲವೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm