ಬ್ರೇಕಿಂಗ್ ನ್ಯೂಸ್
03-06-26 01:18 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ನೇರ ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ. ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಬಹುದಾಗಿದೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm