ಬ್ರೇಕಿಂಗ್ ನ್ಯೂಸ್
11-06-26 08:31 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 11: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪದತ್ಯಾಗಕ್ಕೆ ಮುನ್ನವೇ ಕುರುಬ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾಯಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎನ್ನುವ ವಿಚಾರ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ನೂತನ ಸಿಎಂ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ. ಸಮುದಾಯ ಭವನ ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್ನ ಶೇ. 52 ರಷ್ಟು ಅನುದಾನ ಕೆಲವೇ ಸಮುದಾಯದ ಸಂಸ್ಥೆಗಳಿಗೆ ಮಂಜೂರಾಗಿದೆ.
2026-27 ಸಾಲಿನ ಬಜೆಟ್ನಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 136 ಕೋಟಿ ಮೀಸಲಿಟ್ಟಿದ್ದ ಸರ್ಕಾರ ಈ ಪೈಕಿ ಶೇ 52 ರಷ್ಟು ಅನುದಾನವನ್ನು ಕೇವಲ ಮೂರ್ನಾಲ್ಕು ಸಮುದಾಯಗಳಿಗೆ ಮಾತ್ರ ಮಂಜೂರು ಮಾಡಿದೆ. 8 ಮಡಿವಾಳ ಸಮುದಾಯ ಸಂಘಗಳು, 2 ಯಾದವ ಸಮುದಾಯ ಸಂಘಗಳು, 1 ಹೆಳವ ಸಮುದಾಯ ಸಂಘ, 1 ಸವಿತಾ ಸಮಾಜದ ಸಂಘ ಮತ್ತು ಟೀ ನರಸೀಪುರ ತಾಲೂಕಿಗೆ 13 ಸಮುದಾಯ ಭವನಗಳನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಕುರುಬ ಸಮುದಾಯದ 89 ಸಂಘ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ, ಗದಗದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎನ್ನಲಾಗಿದೆ.
ಹಿಂದುಳಿದ ವರ್ಗಗಳ ಸಮುದಾಯದ ಅಡಿಯಲ್ಲಿ ಸಾವಿರಕ್ಕೂ ಹೆಚ್ಚು ಜಾತಿಗಳು ಬರುತ್ತವೆ. ಪ್ರವರ್ಗ 1ರಲ್ಲಿಯೇ 147 ಜಾತಿಗಳಿದ್ದು, ಇವೆಲ್ಲವನ್ನೂ ಕಡೆಗಣಿಸಿ ಕೇವಲ ಮೂರ್ನಾಲ್ಕು ಸಮುದಾಯಕ್ಕೆ ತರಾತುರಿಯಲ್ಲಿ ಅನುದಾನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಸ್ವಜನರಿಗೆ ಆದ್ಯತೆ ನೀಡಿದರೇ ಎನ್ನುವ ಅನುಮಾನ ಮೂಡಿಸಿದೆ. ಹಿಂದುಳಿದ ವರ್ಗಗಳ ಪೈಕಿ ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದು, ಅಧಿಕಾರದಿಂದ ಇಳಿಯುವ ವೇಳೆ ತರಾತುರಿಯಲ್ಲಿ ಸಿದ್ದರಾಮಯ್ಯ ಈ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm