ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm