ಬ್ರೇಕಿಂಗ್ ನ್ಯೂಸ್
20-06-26 01:33 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 20: ರಾಜ್ಯ ಸರಕಾರ ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಜೆಡಿಎಸ್ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿತು.
ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಸರಕಾರ ಮೊದಲ ಹಂತದಲ್ಲಿ ಸುಮಾರು 498 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಈ ಪೈಕಿ 614 ಅಂದರೆ ಶೇ. 81 ರಷ್ಟು ರೈತರು ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರಾಗಿದ್ದು, ಸುಮಾರು 750 ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಮಾಹಿತಿ ನೀಡಿದರು.
ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹೆಚ್.ಎಂ. ರಮೇಶ್ ಗೌಡ, ಈಗಾಗಲೇ ಮೊದಲ ಹಂತದ ಭೂಸ್ವಾಧೀನದ ನೋಟಿಫಿಕೇಶನ್ ಹೊರಡಿಸಿರುವ ರಾಜ್ಯ ಸರ್ಕಾರವು ಸಂಪೂರ್ಣ ರೈತ ವಿರೋಧಿ ನಿಲುವು ತಳೆದಿದೆ. ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ನಿಲುವು ಹಾಗೂ ಭೂಸ್ವಾಧೀನ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸರ್ಕಾರ ಭೂಮಿಯನ್ನು ಕಸಿದುಕೊಳ್ಳುತ್ತಿರುವ ಭಾಗವು ಹೈನುಗಾರಿಕೆಯ ಸಮೃದ್ಧ ಜಾಗವಾಗಿದ್ದು, ಮಾಸಿಕ ಸುಮಾರು 6 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲನ್ನು ಬೆಂಗಳೂರು ಡೇರಿಗೆ ಪೂರೈಕೆ ಮಾಡುತ್ತಿದೆ. ಭೂಮಿ ರಿಯಲ್ ಎಸ್ಟೇಟ್ ಕುಳಗಳ ಪಾಲಾದರೆ ಅಷ್ಟೂ ಹಾಲಿನ ಉತ್ಪಾದನೆ ನಿಂತು ಹೋಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm