ಬ್ರೇಕಿಂಗ್ ನ್ಯೂಸ್
22-06-26 08:18 pm HK News Staffer ಕರ್ನಾಟಕ
ಶಿವಮೊಗ್ಗ, ಜೂ 22: ಹಿಂದೆ ಕಾಂಗ್ರೆಸ್ನ 17 ಶಾಸಕರಿಗೆ ಹಣ ಕೊಟ್ಟು ಕರೆತಂದು ಚುನಾವಣೆ ನಡೆಸಿದ್ದೆವು ಎಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಬಿಜೆಪಿ ಕುದುರೆ ವ್ಯಾಪಾರ ನಡೆಸಿದ್ದನ್ನು ಒಪ್ಪಿಕೊಂಡಿದ್ದಾರೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಭವನದಲ್ಲಿಂದು ಕ್ರಾಸ್ ವೋಟಿಂಗ್ ಕುರಿತು ಪ್ರತಿಕ್ರಿಯಿಸಿ, ಆಡಳಿತ ಹಾಗೂ ವಿರೋಧ ಪಕ್ಷಗಳು ಅಭಿವೃದ್ದಿ ಬಗ್ಗೆ ಚರ್ಚೆ ನಡೆಸಬೇಕಿತ್ತು. ದುರಾದೃಷ್ಟ ಅಂದ್ರೆ ರಾಜ್ಯದಲ್ಲಿ ಶಾಸಕರುಗಳನ್ನು ಖರೀದಿಸುವ ಕೆಲಸ ಮುಂದುವರೆದಿದೆ. ಕ್ರಾಸ್ ವೋಟಿಂಗ್ ಹಿಂದೆ ಭ್ರಷ್ಟಾಚಾರ ನಡೆದಿರುವುದು ಹೊರಬರಲಿ ಎಂದು ಆಗ್ರಹಿಸಿದರು.
ಈ ಹಿಂದೆ 17 ಜನ ಹಣ ತೆಗೆದುಕೊಂಡು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದರು. ಇದರಿಂದ ಬಿಜೆಪಿ ಸರ್ಕಾರ ಹಾಳಾಗಿ ಹೋಯ್ತು. ಇದು ತಾತ್ಕಾಲಿಕ ಯಶಸ್ಸು ಅಷ್ಟೇ. ಬಿಜೆಪಿ ಸರ್ಕಾರಕ್ಕೆ ಬಂದ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕೆ ಬರುತ್ತದೆ. ಯಾರು ಕ್ರಾಸ್ ವೋಟಿಂಗ್ ಮಾಡಿದ್ದಾರೆಂದು ಸಿಎಂ ತನಿಖೆಗೆ ಆದೇಶಿಸಬೇಕು ಎಂದರು
ಧರ್ಮಸ್ಥಳ ಕೋಟಿ ಕೋಟಿ ಭಕ್ತರು ಸೇರುವ ಸ್ಥಳ. ಮಂಜುನಾಥನ ಭಕ್ತಿಯನ್ನು ಒರೆಗೆ ಹಚ್ಚಬೇಡಿ. ಇಲ್ಲಿ ಅನ್ಯಾಯವಾಗಿದೆ ಅಂತ ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ಹೋಗುವುದನ್ನು ಕೈಬಿಡಬೇಕು ಎಂದು ನಾನು ವೈಯಕ್ತಿಕ ಸಲಹೆ ನೀಡುತ್ತೇನೆ. ಈಗ ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡುತ್ತಾರೆ. ನಂತರ ಹೊರಗೆ ಬಂದು ಅಣ್ಣಪ್ಪನಲ್ಲಿ ಕ್ಷಮೆ ಕೇಳುತ್ತಾರೆ. ಆಗ ಏನು ಮಾಡುತ್ತಾರೆ?. ಹಿಂದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಧರ್ಮಸ್ಥಳದಲ್ಲಿ ಆಣೆ ಮಾಡಿದ್ದು ತಪ್ಪು ಎಂದು ಹೇಳಿದರು.
ಗೃಹ ಸಚಿವ ಖರ್ಗೆ ವಿರುದ್ಧ ವಾಗ್ದಾಳಿ:
ಅರ್ಬನ್ ನಕ್ಸಲರ ರೀತಿ ಹರಿಪ್ರಸಾದ್ ಹಾಗೂ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ. ಇವರು ಹಿರಣ್ಯ ಕಶ್ಯಪ ರೀತಿ ನಡೆದುಕೊಳ್ಳುತ್ತಿದ್ದಾರೆ. ಇವರು ಸೋನಿಯಾ, ರಾಹುಲ್ ಅವರ ಗುಲಾಮರು. ದೇಶದಲ್ಲಿ ಮೂರು ರಾಜ್ಯದಲ್ಲಿ ಮಾತ್ರ ಆಡಳಿತದಲ್ಲಿರುವ ನೀವು ಮುಂದೆ ಕಾಣೆಯಾಗಿ ಹೋಗುತ್ತೀರಿ ಎಂದರು.
ಪ್ರಿಯಾಂಕ್ ಖರ್ಗೆ ತನ್ನ ಇಲಾಖೆಯ ಕೆಲಸ ಬಿಟ್ಟು ಆರ್ಎಸ್ಎಸ್ ತೆಗಳುವ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ನಿನ್ನೆ ಅಧಿಕಾರ ಸ್ವೀಕಾರ ಮಾಡುವಾಗ ಆರ್ಎಸ್ಎಸ್ ಬಗ್ಗೆಯೇ ಹೆಚ್ಚು ಮಾತನಾಡಿದ್ದಾರೆ ಎಂದು ಹೇಳಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm