ಬ್ರೇಕಿಂಗ್ ನ್ಯೂಸ್
02-07-26 09:19 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 2: ಕಳೆದ ನಾಲ್ಕೈದು ವರ್ಷಗಳಿಂದ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಸೂಕ್ತ ಪರಿಶೀಲನೆ ನಡೆಸದೆ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪ ಜೆಡಿಎಸ್ ಕಡೆಯಿಂದ ಕೇಳಿಬಂದಿದೆ. ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಅವರಿಗೆ ಮತದಾನದ ಹಕ್ಕು ನೀಡುತ್ತಿದ್ದಾರೆ. ಈಗ ಎಸ್ಐಆರ್ ನೆಪದಲ್ಲಿ ಸರ್ಕಾರದ ಬಿಎಲ್ಓಗಳು ಸಮುದಾಯ ಭವನದಲ್ಲಿ ಒಂದು ಕೋಮಿನ ಮತದಾರರನ್ನು ಸೇರಿಸಿ ಮೃತಪಟ್ಟಿಗೆ ಸೇರಿಸುತ್ತಿದ್ದಾರೆ. ಸಿಎಂ ಡಿಕೆಶಿ ಅವರ ಮುತುವರ್ಜಿಯಿಂದ ಇಂತಹ ಕೆಲಸ ಆಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿ ಪ್ರಮುಖ ಕಾರಣರಾಗಿದ್ದು, ಈ ಹಿಂದೆ ಕೂಡ ಇಂತಹ ಅಕ್ರಮ ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ವಿಯಾಗಿರುವ ಇತಿಹಾಸ ಅವರಿಗಿದೆ. ಈ ವಿಷಯವನ್ನು ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ, ಕೆಲವು ಕಾರ್ಮಿಕರ ಫೋಟೋಗಳನ್ನು ಅವರ ಒತ್ತಾಯವಿಲ್ಲದೆ ತೆಗೆದು, ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಹಾಗೂ ಸಹಕರಿಸದಿದ್ದರೆ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳನ್ನೂ ಜೆಡಿಎಸ್ ಮಾಡಿದೆ. ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ನಮ್ಮನ್ನ ಹೊರ ಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡಲೇ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿಗಳೇ ಕಳ್ಳ ಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ. ಪ್ರಾಮಾಣಿಕವಾಗಿ ಎಸ್ಐಆರ್ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಮತದಾರರ ಲಿಸ್ಟ್ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಇಂತಹ ದೊಡ್ಡ ಜಾಹೀರಾತಿನ ಮೂಲಕ ಆಕರ್ಷಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್ಐಆರ್ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
02-07-26 09:19 pm
HK News Staffer
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
02-07-26 10:09 pm
HK News Staffer
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm
ಕಾಸರಗೋಡು ; ಶಾಲಾ ಮೈದಾನದಲ್ಲಿ ಕಾರ್ ರೇಸಿಂಗ್, ತಡೆ...
02-07-26 04:21 pm
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm