ಬ್ರೇಕಿಂಗ್ ನ್ಯೂಸ್
02-07-26 09:19 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 2: ಕಳೆದ ನಾಲ್ಕೈದು ವರ್ಷಗಳಿಂದ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಕರ್ನಾಟಕದಲ್ಲಿ ವಾಸಿಸುತ್ತಿದ್ದು, ಸೂಕ್ತ ಪರಿಶೀಲನೆ ನಡೆಸದೆ ಅವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪ ಜೆಡಿಎಸ್ ಕಡೆಯಿಂದ ಕೇಳಿಬಂದಿದೆ. ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಅವರಿಗೆ ಮತದಾನದ ಹಕ್ಕು ನೀಡುತ್ತಿದ್ದಾರೆ. ಈಗ ಎಸ್ಐಆರ್ ನೆಪದಲ್ಲಿ ಸರ್ಕಾರದ ಬಿಎಲ್ಓಗಳು ಸಮುದಾಯ ಭವನದಲ್ಲಿ ಒಂದು ಕೋಮಿನ ಮತದಾರರನ್ನು ಸೇರಿಸಿ ಮೃತಪಟ್ಟಿಗೆ ಸೇರಿಸುತ್ತಿದ್ದಾರೆ. ಸಿಎಂ ಡಿಕೆಶಿ ಅವರ ಮುತುವರ್ಜಿಯಿಂದ ಇಂತಹ ಕೆಲಸ ಆಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲ ಅಕ್ರಮಗಳಿಗೆ ಮುಖ್ಯಮಂತ್ರಿ ಪ್ರಮುಖ ಕಾರಣರಾಗಿದ್ದು, ಈ ಹಿಂದೆ ಕೂಡ ಇಂತಹ ಅಕ್ರಮ ರಾಜಕೀಯ ಚಟುವಟಿಕೆಗಳಲ್ಲಿ ಯಶಸ್ವಿಯಾಗಿರುವ ಇತಿಹಾಸ ಅವರಿಗಿದೆ. ಈ ವಿಷಯವನ್ನು ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ, ಕೆಲವು ಕಾರ್ಮಿಕರ ಫೋಟೋಗಳನ್ನು ಅವರ ಒತ್ತಾಯವಿಲ್ಲದೆ ತೆಗೆದು, ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಹಾಗೂ ಸಹಕರಿಸದಿದ್ದರೆ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳನ್ನೂ ಜೆಡಿಎಸ್ ಮಾಡಿದೆ. ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ನಮ್ಮನ್ನ ಹೊರ ಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡಲೇ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿಗಳೇ ಕಳ್ಳ ಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ. ಪ್ರಾಮಾಣಿಕವಾಗಿ ಎಸ್ಐಆರ್ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಮತದಾರರ ಲಿಸ್ಟ್ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಇಂತಹ ದೊಡ್ಡ ಜಾಹೀರಾತಿನ ಮೂಲಕ ಆಕರ್ಷಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್ಐಆರ್ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm