ಬ್ರೇಕಿಂಗ್ ನ್ಯೂಸ್
08-07-26 01:13 pm Hk Staffer ಕರ್ನಾಟಕ
ಮೈಸೂರು, ಜುಲೈ 8: ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯ ಮಲ್ಲಯ್ಯನಪುರ ಬಳಿಯ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ಖನಿಜದ ನಿಕ್ಷೇಪವನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ.
ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ ಭಾರತೀಯ ಭೂ ವೈಜ್ಞಾನಿಕ ಇಲಾಖೆಯಿಂದ ಏರಿಯಲ್ ಸರ್ವೆ ನಡೆಸಲಾಗಿತ್ತು. ಈ ವೇಳೆ, ಕಚ್ಚಾ ತೈಲ, ಚಿನ್ನ ಮತ್ತು ಅಪರೂಪದ ಖನಿಜ ಸಂಪತ್ತಿನ ನಿಕ್ಷೇಪಗಳಿರುವ ಪ್ರದೇಶಗಳನ್ನು ಗುರುತಿಸಲಾಗಿತ್ತು. ಇದೇ ಸರ್ವೆಯಲ್ಲಿ ಗುಂಡ್ಲುಪೇಟೆ ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಮಣಗಹಳ್ಳಿ, ವಿಜಯಪುರ ಮತ್ತು ಕೂತನೂರು ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 700 ಎಕರೆ ವ್ಯಾಪ್ತಿಯಲ್ಲಿ ಅಪರೂಪದ ಖನಿಜ (ರೇರ್ ಅರ್ಥ್ ಮಿನರಲ್) ನಿಕ್ಷೇಪ ಪತ್ತೆಯಾಗಿದೆ.
ಈ ರೀತಿ ನಿಕ್ಷೇಪ ಇರುವ ಪ್ರದೇಶದಲ್ಲಿ 70 ಎಕರೆಯನ್ನು ಥೋರಿಯಂ ಹಾಗೂ ಕೋರ್ ಮಿನರಲ್ಸ್ ಜೋನ್ ಎಂದು ಗುರುತಿಸಿರುವ ಕೇಂದ್ರ ಸರ್ಕಾರ ಗಣಿಗಾರಿಕೆ ನಡೆಸಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಣ್ಣೂರುಕೇರಿ ಗ್ರಾಮದ ಪೂರ್ವ ಪಾರ್ಶ್ವದ ಚಿಕ್ಕಮ್ಮ ತಾಯಿ ಬೆಟ್ಟದ ಪಶ್ಚಿಮ ಪಾರ್ಶ್ವದಲ್ಲೂ ಈ ಹಿಂದೆ ಖನಿಜ ನಿಕ್ಷೇಪ ಇರುವ ಬಗ್ಗೆ ಸುದ್ದಿಗಳು ಹರಡಿದ್ದವು. ಈಗಲೂ ಈ ಪ್ರದೇಶದ ಒಂದು ಪ್ರದೇಶಕ್ಕೆ ಬೀಗ ಮುದ್ರೆ ಹಾಕಲಾಗಿದೆ. ಈಗ ಥೋರಿಯಂ ನಿಕ್ಷೇಪ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಖನಿಜ ಸಾಧ್ಯತೆಯ ಚರ್ಚೆಗೆ ಮತ್ತಷ್ಟು ಬಲ ಬಂದಿದೆ.
ಥೋರಿಯಂ ನಿಕ್ಷೇಪ ಎಂದರೆ ಭೂಮಿಯಲ್ಲಿನ ಕಲ್ಲು, ಮಣ್ಣು ಮತ್ತು ನೀರಿನಲ್ಲಿ ನೈಸರ್ಗಿಕವಾಗಿ ದೊರೆಯುವ ವಿಕಿರಣಶೀಲ ಲೋಹದ ಶೇಖರಣೆಯಾಗಿದೆ. ಥೋರಿಯಂ ಅಪರೂಪದ ಲೋಹವಾಗಿದ್ದು ಸ್ವತಃ ಇಂಧನವಾಗಿ ಕೆಲಸ ಮಾಡದಿದ್ದರೂ ನ್ಯೂಟ್ರಾನ್ ಹೀರಿಕೊಳ್ಳುವಿಕೆಯ ಮೂಲಕ ಇದನ್ನು ಪರಮಾಣು ಸ್ಥಾವರದ ರಿಯಾಕ್ಟರ್ಗಳಲ್ಲಿ ಬಳಸಬಹುದು. ಥೋರಿಯಂ ಪ್ರಮುಖವಾಗಿ ‘ಮೋನಜೈಟ್’ಎಂಬ ಖನಿಜ ಮರಳಿನಲ್ಲಿ ದೊರೆಯುತ್ತದೆ. ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಅಂದರೆ ಸುಮಾರು 8.50 ಲಕ್ಷ ಟನ್ಗಳಷ್ಟು ಥೋರಿಯಂ ನಿಕ್ಷೇಪಗಳನ್ನು ಹೊಂದಿದೆ ಎನ್ನಲಾಗುತ್ತದೆ. ವಿಶೇಷವಾಗಿ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕಡಲ ತೀರದ ಮರಳಿನಲ್ಲಿ ಹೇರಳವಾಗಿ ಲಭ್ಯವಿದೆ ಎನ್ನುವ ಅಂದಾಜಿದೆ. ಭವಿಷ್ಯದಲ್ಲಿ ಭಾರತದ ಮಹತ್ವಾಕಾಂಕ್ಷೆಯ ಪರಮಾಣು ವಿದ್ಯುತ್ ಯೋಜನೆಗಳಲ್ಲಿ ಇದು ಅತ್ಯಂತ ಪ್ರಮುಖ ಇಂಧನವಾಗಲಿದೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm