ಬ್ರೇಕಿಂಗ್ ನ್ಯೂಸ್
08-07-26 02:06 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 08: ಆರ್ ಎಸ್ ಎಸ್ ಸಂಘಟನೆ ಬೆಳಗಾವಿಯಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಬೇಕಿಲ್ಲ. ಅದು ಖಾಸಗಿ ಕಾರ್ಯಕ್ರಮ, ಆದರೆ ಬೀದಿಗಿಳಿದರೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, "ಕಾರ್ಯಕ್ರಮ ನಡೆಯಲಿ. ಅದು ಯಾವುದೇ ಖಾಸಗಿ ಕಾರ್ಯಕ್ರಮಕ್ಕೆ ನಮ್ಮ ಅನುಮತಿ ಬೇಕಾಗಿಲ್ಲಾ. ಆದರೆ ಬೀದಿಗಿಳಿದ್ರೆ ಅನುಮತಿ ಬೇಕಾಗುತ್ತದೆ" ಎಂದರು.
ಯಾವುದೇ ಸಂಘಟನೆಯಿಂದ ದೊಡ್ಡ ಮೆರವಣಿಗೆ ಮಾಡಬೇಕಾದ್ರೆ ಅನುಮತಿ ಬೇಕಲ್ವಾ? ಬೀದಿಗಿಳಿದ್ರೆ ಅನುಮತಿ ಕೇಳೇ ಕೇಳ್ತಾರೆ. ಕಾನೂನು ಸುವ್ಯವಸ್ಥೆ ವಾತಾವರಣ ಸರಿ ಇದ್ರೆ ಅನುಮತಿ ಕೊಡುತ್ತೇವೆ. ಇಲ್ಲಾ ಅಂದ್ರೆ ಮುಂದೂಡಿ ಅಂತಾ ಹೇಳುತ್ತೇವೆ ಎಂದರು.
ದೇಶಾದ್ಯಂತ ಇರುವ ಹಿರಿಯ ಆರ್.ಎಸ್.ಎಸ್. ಪ್ರಚಾರಕರು ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ವಾರ್ಷಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ದೇಶಾದ್ಯಂತ ನಡೆಯುವ ಜನಗಣತಿ ಪ್ರಕ್ರಿಯೆ, ರಾಮನ ದೇಣಿಗೆ ವಿವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಜುಲೈ 10ರಂದು ಸಭೆ ಆರಂಭಗೊಳ್ಳಲಿದ್ದು 12ರಂದು ಮುಕ್ತಾಯವಾಗಲಿದೆ. ಮೂರು ದಿನಗಳ ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಪರಾಮರ್ಶೆ ನಡೆಯಲಿದೆ. ಅಷ್ಟೇ ಅಲ್ಲದೆ, ಸಂಘಟನೆಯ ವ್ಯಾಪ್ತಿಯನ್ನು ವಿಸ್ತರಿಸಲು ಶಾಖೆಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ. ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತಿದ ವಿಚಾರದ ಬಗ್ಗೆಯೂ ವಿಮರ್ಶೆ ನಡೆಯುವ ಸಾಧ್ಯತೆ ಇದೆ.
ನಾನು ಇರೋವರೆಗೂ ಅನುಮತಿ ಕಡ್ಡಾಯ !
ಮಂಗಳವಾರ ಕಲಬುರ್ಗಿಯಲ್ಲಿ ಮಾತನಾಡಿದ್ದ ಖರ್ಗೆ, ನಾನು ಗೃಹಸಚಿವನಾಗಿ ಇರುವ ವರೆಗೂ ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈಗಾಗಲೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದೇನೆ. 100 ವರ್ಷದ ಹಳೆಯ ಸಂಘಟನೆ ಅಂತಾರಲ್ಲ, ನಿಮ್ಮ ಸಂಘಟನೆಯ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಲು ನೀವು ಕಡ್ಡಾಯವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಎಲ್ಲೋ ಇರಬಹುದು, ಹುಡುಕಿಕೊಂಡು ಬರಲಿ. ಅಲ್ಲಿಯವರೆಗೆ ಸುಮ್ಮನೆ ಬಿಡಲ್ಲ ಎಂದು ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm