ಬ್ರೇಕಿಂಗ್ ನ್ಯೂಸ್
30-07-26 10:28 am HK News Staffer ಕರ್ನಾಟಕ
ವಿಜಯಪುರ, ಜುಲೈ 30: ಸಿದ್ದರಾಮಯ್ಯ ಪಾಪ ಬಹಳ ಸ್ವಚ್ಛ ರಾಜಕಾರಣಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯವರಾಗಿದ್ದರು. ಆದರೆ ಈಗ ಕಲುಷಿತರಾಗಿದ್ದಾರೆ, ಅವರ ಮಗ ಮಾಡಿದ ಕರ್ಮಕಾಂಡದಿಂದ ಅವರು ಕಲುಷಿತರಾಗಿದ್ದಾರೆ ಎಂದರು.
ಸಿದ್ದರಾಮಯ್ಯ ಕಲುಷಿತಗೊಳ್ಳಲು ಅವರ ಮಗ ಮತ್ತು ಭೈರತಿ ಸುರೇಶ್ ಕಾರಣ ಎಂದು ಯತ್ನಾಳ್ ಆರೋಪಿಸಿದ್ದಾರೆ. ಜಾತಿ ವ್ಯವಸ್ಥೆ, ಬಾಯಿತೆರೆದ್ರೆ ಅಲ್ಪ ಸಂಖ್ಯಾತರಿಗೆ ಅಷ್ಟು ಕೋಟಿ, ಇಷ್ಟು ಕೋಟಿ ಎಂದು ಹೇಳ್ತಾರೆ, ಅವರಿಗೆ ದಲಿತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ, ತಮ್ಮ ಸಮುದಾಯಕ್ಕೆ ಅವರು ಹೆಚ್ಚಿನದಾಗಿ ಏನು ಮಾಡಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಸಂಪೂರ್ಣವಾಗಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯಬೇಕು. ಕಾಂಗ್ರೆಸ್ ಮಣ್ಣಾಗಬೇಕು ಎಂದರು.
ಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ, ರಾಜ್ಯದಲ್ಲಿ 4. 80 ಲಕ್ಷ ಹುದ್ದೆಗಳು ಖಾಲಿಯಿವೆ, ಕೆಪಿಎಸ್ ಸಿ ಹಗರಣ ಸಂಬಂಧ ಮೊದಲು ಡಿ.ಕೆ ಶಿವಕುಮಾರ್ ರಾಜಿನಾಮೆ ನೀಡಬೇಕು. ಕೆಪಿಎಸ್ ಸಿ ಯನ್ನು ಮೊದಲು ವಿಸರ್ಜನೆ ಮಾಡಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ
ಕರ್ನಾಟಕದಲ್ಲಿ ಬಿಜೆಪಿ ನರಸತ್ತಿದೆ. ಪಕ್ಷಕ್ಕೆ ಧಮ್ ಇಲ್ಲ. ಇದರಿಂದ ಕಾಂಗ್ರೆಸ್ ನವರಿಗೆ ವಿರೋಧ ಪಕ್ಷಗಳ ಬಗ್ಗೆ ಯಾವುದೇ ಭಯವಿಲ್ಲ. ವಿಜಯೇಂದ್ರನ ಕ್ಯಾಂಡಿಡೇಟ್ ಒಬ್ಬ 2 ಕೋಟಿ ಹಣ ಕೊಟ್ಟು kpSc ನಲ್ಲಿ ಕೆಲಸ ತೆಗೆದುಕೊಂಡಿರುವುದು ಬಹಿರಂಗ ಸತ್ಯವಾಗಿದೆ.
ಪ್ರತಾಪ್ ಸಿಂಹನನ್ನು ಮೂಲೆಗುಂಪು ಮಾಡಿದ್ದಾರೆ. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿಲ್ಲ ಎಂಬುದನ್ನು ಇದುವರೆಗೆ ತಿಳಿಸಿಲ್ಲ ಎಂದರು. ಪಕ್ಷಕ್ಕೆ ದುಡಿದವರಿಗಲ್ಲ ರಾತ್ರಿ ಯಾರು ಸೂಟ್ ಕೇಸ್ ತಗೊಂಡು ಹೋಗಿ ಕೊಡ್ತಾರೋ ಅವರಿಗೆ ಟಿಕೆಟ್ ಇಲ್ಲ ಎಂದರು
ಕೆಪಿಎಸ್ಸಿ ಅಧ್ಯಕ್ಷರ ಮನೆಯಲ್ಲಿ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಫೋಟೋ ಇದೆ, ದೇಶದ ಹೋರಾಟಗಾರರ ಯಾವುದೇ ಫೋಟೋ ಇಲ್ಲ,ವಿಜಯೇಂದ್ರ ಎಲ್ಲಾದ್ರೂ ಬಾಯಿ ಬಿಟ್ಟಿದ್ದಾನಾ.ಅಂತ ಭ್ರಷ್ಟನನ್ನ ಮೇಲಿನವರು ಹೇಗೆ ರಾಜ್ಯಾಧ್ಯಕ್ಷ ನನ್ನಾಗಿ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಲಿಂಗಾಯತ ಸಮುದಾಯವನ್ನು ಯಡಿಯೂರಪ್ಪ ಗುತ್ತಿಗೆ ತಗೊಂಡಿದ್ದಾನಾ ಎಂದು ಪ್ರಶ್ನಿಸಿದ್ದಾರೆ.
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm