ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm